Advertisement

ಶಾಲೆಗಳು ಸದ್ಯಕ್ಕೆ ಆರಂಭವಾಗಲ್ಲ: ಸುರೇಶ್‌ ಕುಮಾರ್‌

07:43 PM Jun 29, 2020 | Sriram |

ಬೆಂಗಳೂರು : ರಾಜ್ಯದಲ್ಲಿ ಶಾಲೆಗಳನ್ನು ಪುನರ್‌ ಆರಂಭಿಸುವ ಬಗ್ಗೆ ಈವರೆಗೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಮತ್ತು ದಿನಾಂಕವನ್ನು ನಿಗದಿ ಮಾಡಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಹೇಳಿದರು.

Advertisement

ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂಬಂಧಿಸಿದಂತೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಶಾಲಾರಂಭದ ವಿಚಾರ ಪ್ರಸ್ತಾಪಿಸಿದ ಅವರು, ಶಾಲೆ ಪುನರ್‌ ಆರಂಭಿಸುವ ಸಂಬಂಧ ಸರ್ಕಾರ ಅಥವಾ ಶಿಕ್ಷಣ ಇಲಾಖೆ ಈವರೆಗೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಶಾಲೆಯ ಆರಂಭಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಚರ್ಚೆ ಅಗತ್ಯವಿದೆ ಎಂದರು.

ಶಾಲೆ ಆರಂಭದ ವಿಚಾರಗಾಗಿ ಕಾಲೇಜುಗಳು ಯಾವಾಗ ಆರಂಭ ಎನ್ನುವ ಚರ್ಚೆಯೂ ಹುಟ್ಟುಕೊಳ್ಳುತ್ತದೆ. ಹೀಗಾಗಿ ಶಾಲೆ ಆರಂಭಕ್ಕೆ ಸಂಬಂಧಿಸಿದಂತೆ ಸರ್ಕಾರ ಅಥವಾ ಶಿಕ್ಷಣ ಇಲಾಖೆಯ ಈವರೆಗೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಹಾಗೆಯೇ ಶಾಲೆ ಪುನರ್‌ ಆರಂಭಿಸುವ ಯಾವ ಯೋಚನೆಯೂ ಸದ್ಯಕ್ಕೆ ಇಲ್ಲ. ಶಾಲೆ ಪುನರ್‌ ಆರಂಭ ಮಾಡುವ ಸಂದರ್ಭದಲ್ಲಿ ಬಹಿರಂಗ ಚರ್ಚೆ ಅಥವಾ ಅಭಿಪ್ರಾಯ ಸಂಗ್ರಹ ಮಾಡಿಯೇ ಮುಂದಿನ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದು ಹೇಳಿದರು.

ಹೀಗಾಗಿ ಶಾಲಾರಂಭದ ಬಗ್ಗೆ ಪಾಲಕ, ಪೋಷಕರು ಅಥವಾ ವಿದ್ಯಾರ್ಥಿಗಳು ಆತಂಕ ಮತ್ತು ಯಾವುದೇ ರೀತಿಯ ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next