Advertisement

ಕೋವಿಡ್ ಕಾರಣದಿಂದ ಶಾಲೆ ಮುಚ್ಚುವುದಿಲ್ಲ: ಶಿಕ್ಷಣ ಸಚಿವರ ಸ್ಪಷ್ಟನೆ

02:10 PM Dec 09, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಸೋಂಕು ಪ್ರಮಾಣ ಕಡಿಮೆ ಇರುವ ಕಾರಣದಿಂದ ಯಾವುದೇ ಶಾಲೆ ಮುಚ್ಚುವುದಿಲ್ಲ. ಈ ಹಿಂದೆ ಇದ್ದ ಮಾರ್ಗಸೂಚಿಯೇ ಮುಂದುವರಿರುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಎರಡು ದಿನಗಳಿಂದ ಕೋವಿಡ್ ಸಂಖ್ಯೆ ಇಳಿಮುಖವಾಗಿದೆ. ಶಾಲೆಗಳಲ್ಲಿ ಸಹ 1-10 ತರಗತಿಯಲ್ಲೂ ಕೋವಿಡ್ ಕಂಡು ಬಂದಿಲ್ಲ. ಪಿಯು ಕಾಲೇಜಿನಲ್ಲಿ ಮಾತ್ರ ಕಂಡು ಬಂದಿದೆ. ಕೋವಿಡ್ ಬಂದ ಮಕ್ಕಳು ಆರೋಗ್ಯವಾಗಿದ್ದಾರೆ. ಮತ್ತೆ ಕಾಲೇಜು ಆರಂಭವಾಗಿದೆ. ಶಿಕ್ಷಣ ಹಾಗೂ ಆರೋಗ್ಯ ಸಮಿತಿ ಮಾಡಿ.ಹಾಸ್ಟೆಲ್ ಹಾಗೂ ಶಾಲೆಗಳಿಗೆ ತೆರಳಿ ತಪಾಸಣೆ ಮಾಡಲು ಹೇಳಿದ್ದೇವೆ. ಜಂಟಿ ಕಮಿಟಿ ಮಾಡಿ ಕಠಿಣ ಕ್ರಮ ಜಾರಿ ಮಾಡಲಿದ್ದಾರೆ ಎಂದರು.

ದ್ವಿತೀಯ ಪಿಯು ಮಕ್ಕಳಿಗೆ ಇಂದು ಮಧ್ಯ ವಾರ್ಷಿಕ ಪರೀಕ್ಷೆ ನಡೆಯುತ್ತಿದೆ. ಕಳೆದ ಎರಡು ವರ್ಷ ಪರೀಕ್ಷೆಯಾಗಿಲ್ಲ. ಹಾಗಾಗಿ ಪಿಯುಸಿ ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿದೆ ಎಂದು ಸಚಿವರು ಹೇಳಿದರು.

ಇದನ್ನೂ ಓದಿ:ನೈಟ್ ಕರ್ಫ್ಯೂ ಬಗ್ಗೆ ಸದ್ಯದಲ್ಲೇ ನಿರ್ಧಾರ: ಸಿಎಂ ಬೊಮ್ಮಾಯಿ

ರೆಸಿಡೆನ್ಶಿಯಲ್ ಶಾಲೆಗಳಿಗೆ ಹೆಚ್ಚು ಮಹತ್ವ ನೀಡಲಾಗುತ್ತಿದೆ. ಅದನ್ನ ಮಾನಿಟರಿಂಗ್ ಮಾಡಲಾಗುತ್ತಿದೆ. ಬಿಇಓ ಮತ್ತು ಟಿಹೆಚ್ಓ ಸಮಿತಿ ನೇತೃತ್ವದಲ್ಲಿ ತಪಾಸಣೆ ಮಾಡಲಾಗುತ್ತದೆ. ಒಟ್ಟು ಈವರೆಗೂ 172 ಶಿಕ್ಷಕರು ಮತ್ತು ಮಕ್ಕಳಿಗೆ ಪಾಸಿಟಿವ್ ಬಂದಿದೆ. ಇದರಲ್ಲಿ ನೂರು ಮಕ್ಕಳು ಈಗಾಗಲೇ ಗುಣಮುಖರಾಗಿದ್ದಾರೆ ಎಂದರು.

Advertisement

ಹಾಸ್ಟೆಲ್‌ ಗಳಲ್ಲಿ ಒಟ್ಟಿಗೆ ಊಟಕ್ಕೆ ಹೋಗಬಾರದು. ದೂರ ದೂರದಲ್ಲಿ ಕುಳಿತು ಊಟ ಮಾಡಬೇಕು. ಸ್ನಾನ ಮಾಡುವಾಗ ಒಟ್ಟಿಗೆ ಹೋಗಬಾರದು. ಮಲಗುವಾಗಲೂ ಸಾಧ್ಯವಾದಷ್ಟು ದೂರ ಮಲಗಲು ಸೂಚನೆ ನೀಡಲಾಗಿದೆ. ಆದರೆ ಈ ಬಗ್ಗೆ ಯಾವುದೇ ಮಾರ್ಗಸೂಚಿ ಮಾಡಿಲ್ಲ ಎಂದು ಶಿಕ್ಷಣ ಸಚಿವರು ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next