Advertisement

ದೇವಸ್ಥಾನದ ಪ್ರಸಾದಕ್ಕೂ ವೈಜ್ಞಾನಿಕ ಪರೀಕ್ಷೆ; ರಾಜ್ಯದ 4 ದೇವಸ್ಥಾನಗಳಲ್ಲಿ ಅನುಷ್ಠಾನ

01:40 AM Jan 03, 2022 | Team Udayavani |

ಉಡುಪಿ: ಕೇಂದ್ರ ಸರಕಾರ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಪ್ರಾಧಿಕಾರದ ವತಿಯಿಂದ ಧಾರ್ಮಿಕ ಕೇಂದ್ರ ಗಳಲ್ಲಿ ದೊರೆಯುವ ಪ್ರಸಾದದ ಗುಣಮಟ್ಟ ಪರಿಶೀಲನೆಗೆ “ಭೋಗ್‌’ ಕಾರ್ಯಕ್ರಮ ಅನು ಷ್ಠಾನಗೊಳಿಸಿದ್ದು, ಕರಾವಳಿಯ 4 ದೇವಸ್ಥಾನಗಳಲ್ಲಿ ಶೀಘ್ರವೇ ಕಾರ್ಯರೂಪಕ್ಕೆ ಬರಲಿದೆ.

Advertisement

ಈ ಮೂಲಕ ಭಕ್ತರಿಗೆ ಉತ್ತಮ ಗುಣಮಟ್ಟ ಖಾತರಿಪಡಿಸಿದ ಪ್ರಸಾದವನ್ನು ನೀಡುವ ಉದ್ದೇಶವನ್ನು ಸರಕಾರ ಹೊಂದಿದೆ. ಪ್ರಾರಂಭಿಕ ಹಂತದಲ್ಲಿ ಕರಾವಳಿಯ ನಾಲ್ಕು ದೇವಸ್ಥಾನಗಳನ್ನು ಆಯ್ಕೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಈ ಸಂಖ್ಯೆಯನ್ನು ಹೆಚ್ಚಿಸುವ ನಿರೀಕ್ಷೆ ಹೊಂದಲಾಗಿದೆ. ಪ್ರಸಾದಗಳಲ್ಲಿ ಯಾವ ಉತ್ಪನ್ನಗಳನ್ನು ಎಷ್ಟು ಪ್ರಮಾಣದಲ್ಲಿ ಬಳಕೆ ಮಾಡಬೇಕು. ಅದರ ಶೇಖರಣೆ ಹೇಗೆ? ಯಾವ ವಸ್ತುಗಳನ್ನು ಬಳಸಬಾರದು ಎಂಬ ಅಂಶಗಳನ್ನು ಇದರ ಸದಸ್ಯರು ಗಮನಿಸಲಿದ್ದಾರೆ.

ಭಾರತದಲ್ಲಿರುವ ವಿವಿಧ ಸ್ಥಳಗಳಲ್ಲಿ ಭಿನ್ನ ಭಿನ್ನ ಆಹಾರ ಕ್ರಮ ಇದ್ದು, ಅದಕ್ಕೆ ಅನುಗುಣವಾಗಿ ಪ್ರಸಾದವನ್ನು ಸಿದ್ಧಪಡಿಸಲಾಗುತ್ತದೆ. ಪ್ರಸಾದಕ್ಕೆ ಬೇಕಿರುವಸಾಮಗ್ರಿಗಳನ್ನು ಸಮಪ್ರಮಾಣದಲ್ಲಿ ಹಾಗೂ ಇದನ್ನು ಸೇವಿಸಿದ ಬಳಿಕ ತೊಂದರೆಯಾಗದ ರೀತಿಯಲ್ಲಿ ಸಿದ್ಧಪಡಿಸುವ ಅಗತ್ಯವಿದೆ. ಈ ಹಿನ್ನೆಲೆಯನ್ನು ಬಹಳ ನಾಜೂಕು ರೀತಿಯನ್ನು ಇದನ್ನು ಪಾಲಿಸುವ ಹೊಣೆಗಾರಿಕೆ ಇಲಾಖೆಯದ್ದು.

ಇದನ್ನೂ ಓದಿ:ಅಕ್ರಮವಾಗಿ ಒಳನುಸುಳಲು ಯತ್ನಿಸಿದ ಪಾಕ್‌ ಸೈನಿಕನ ಹೊಡೆದುರುಳಿಸಿದ ಸೇನೆ

ಅಚ್ಚುಕಟ್ಟು ನಿರ್ವಹಣೆ
ಪ್ರಸಾದ ಸಿದ್ಧಪಡಿಸುವ ಸ್ಥಳಗಳಲ್ಲಿ ಇನ್ನು ಮುಂದೆ ಶುಚಿತ್ವಕ್ಕೆ ಬಹಳಷ್ಟು ಮಹತ್ವ ನೀಡಲಾಗುತ್ತದೆ. ಆಹಾರ ಸುರಕ್ಷೆ ಮತ್ತು ಗುಣಮಟ್ಟ ಕಾಯ್ದೆಯ ನಿಯಮಾವಳಿಗಳಂತೆ ಎಲ್ಲ ಪ್ರಸಾದಗಳನ್ನೂ ತಯಾರಿಸಲಾಗುತ್ತದೆ. ಪ್ರಸಾದ ಸೇವಿಸಿದ ಭಕ್ತರ ಆರೋಗ್ಯಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದು ಇದರ ಉದ್ದೇಶ.

Advertisement

ಆಯ್ಕೆಯಾಗಿರುವ ದೇವಸ್ಥಾನಗಳು
ಉಡುಪಿ ಜಿಲ್ಲೆಯ ಕೊಲ್ಲೂರು, ದ.ಕ. ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ, ಉತ್ತರ ಕನ್ನಡ ಶಿರಸಿಯ ಮಾರಿಕಾಂಬಾ ದೇವಸ್ಥಾನಗಳು ಆಯ್ಕೆಯಾಗಿದ್ದು, ಅಗತ್ಯವಿರುವ ಸಿಬಂದಿಗೆ ತರಬೇತಿ ನೀಡಲಾಗಿದೆ.

ಕೇಂದ್ರ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಪ್ರಾಧಿಕಾರವು ಭೋಗ್‌ ಕಾರ್ಯಕ್ರಮದ ಮೂಲಕ ದೇವಸ್ಥಾನಗಳ ಪ್ರಸಾದಗಳನ್ನು ಗುಣಮಟ್ಟ ಪರಿಶೀಲಿಸಿ ನೀಡಲಿದೆ. ಇದಕ್ಕಾಗಿ 4 ಜಿಲ್ಲೆಗಳು ಆಯ್ಕೆಗೊಂಡಿದ್ದು, ಶೀಘ್ರದಲ್ಲಿ ಕಾರ್ಯರೂಪಕ್ಕೆ ಬರಲಿದೆ.
– ಡಾ| ಪ್ರೇಮಾನಂದ, ಜಿಲ್ಲಾ ಆಹಾರ ಸುರಕ್ಷೆ ಅಧಿಕಾರಿ, ಉಡುಪಿ

-ಪುನೀತ್‌ ಸಾಲ್ಯಾನ್‌

Advertisement

Udayavani is now on Telegram. Click here to join our channel and stay updated with the latest news.

Next