Advertisement

ಸಿಂಧಿಯಾ ಗಡುವು: ಸೋನಿಯಾ ಭೇಟಿ

10:13 AM Sep 01, 2019 | sudhir |

ಹೊಸದಿಲ್ಲಿ: ಮಧ್ಯಪ್ರದೇಶ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಒಳ ಜಗಳದ ಮಧ್ಯೆಯೇ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಮ.ಪ್ರ ಸಿಎಂ ಕಮಲ್‌ನಾಥ್‌ ಭೇಟಿ ಮಾಡಿದ್ದಾರೆ. ಮ.ಪ್ರ ಕಾಂಗ್ರೆಸ್‌ಗೆ ತನ್ನನ್ನೇ ಮುಖ್ಯಸ್ಥನನ್ನಾಗಿ ಮಾಡಬೇಕು ಎಂದು ಜ್ಯೋತಿರಾದಿತ್ಯ ಸಿಂಧಿಯಾ ಈಗಾಗಲೇ ಬೇಡಿಕೆ ಸಲ್ಲಿಸಿದ್ದು, ಒಂದು ವೇಳೆ ನನ್ನನ್ನು ಮುಖ್ಯಸ್ಥನನ್ನಾಗಿ ಮಾಡದಿದ್ದರೆ ಬೇರೆ ಆಯ್ಕೆಗಳನ್ನು ಪರಿಶೀಲಿಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ. ಮೂಲಗಳ ಪ್ರಕಾರ ಸಿಂಧಿಯಾ ಬಿಜೆಪಿ ನಾಯಕರ ಜೊತೆ ಸಂಪರ್ಕದಲ್ಲಿದ್ದು, ಪಕ್ಷದ ಅಧ್ಯಕ್ಷರನ್ನಾಗಿ ನೇಮಿಸದಿದ್ದರೆ ಬಿಜೆಪಿ ಸೇರುವ ಸಾಧ್ಯತೆಯಿದೆ.

Advertisement

ಕಮಲ್‌ನಾಥ್‌ ಮ.ಪ್ರ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ನಂತರದಲ್ಲಿ ಪಕ್ಷದ ಅಧ್ಯಕ್ಷ ಹುದ್ದೆಯನ್ನು ತೊರೆಯಬೇಕಾಗಿತ್ತು. ಆದರೆ ಲೋಕಸಭೆ ಚುನಾವಣೆ ಸಮೀಪಿಸಿದ ಹಿನ್ನೆಲೆಯಲ್ಲಿ ಅಧ್ಯಕ್ಷ ಹುದ್ದೆಯಲ್ಲೇ ಅವರು ಮುಂದುವರಿದಿದ್ದರು. ಈಗ ಅಧ್ಯಕ್ಷ ಹುದ್ದೆ ಬದಲಾವಣೆ ಸಮಯ ಸಮೀಪಿಸುತ್ತಿದ್ದಂತೆ ಸಿಂದಿಯಾ ಪರ ಹಲವು ಮುಖಂಡರು ಒಲವು ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಹಲವೆಡೆ ಈ ಬಗ್ಗೆ ಪ್ರತಿಭಟನೆಯೂ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next