Advertisement

ಸ್ಕೂಟರ್‌ ಅವಘಡ:ಇಂಜಿನಿಯರಿಂಗ್‌ ವಿದ್ಯಾರ್ಥಿನಿ ಸಾವು

01:11 PM Oct 25, 2017 | Team Udayavani |

ಪುತ್ತೂರು: ಇಲ್ಲಿನ ದರ್ಬೆ ವೃತ್ತದ ಬಳಿ ಬುಧವಾರ ಬೆಳ್ಳಂಬೆಳಗ್ಗೆ ನಡೆದ ರಸ್ತೆ ಅವಘಡವೊಂದರಲ್ಲಿ ಇಂಜಿನಿಯರಿಂಗ್‌ ವಿದ್ಯಾರ್ಥಿನಿ ದಾರುಣವಾಗಿ ಕೊನೆಯುಸಿರೆಳೆದಿದ್ದಾರೆ.

Advertisement

ಸಹ್ಯಾದ್ರಿ ಕಾಲೇಜಿನ ಪ್ರಥಮ ವರ್ಷದ ಇಂಜಿನಿಯರಿಂಗ್‌ ವಿದ್ಯಾರ್ಥಿನಿ ಸಮ್‌ರೀನಾ ಮೃತ ದುರ್‌ದೈವಿ. ಈಕೆ  ಕೂರ್ನಡ್ಕ ನಿವಾಸಿ ಸಿಟಿ ಬಜಾರ್‌ನ ಮಾಲೀಕ ಹಸೈನಾರ್‌ ಅವರ ಪುತ್ರಿ ಎಂದು ತಿಳಿದು ಬಂದಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯುವ ವೇಳೆಯಲ್ಲಿ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿರುವ ಬಗ್ಗೆ ವರದಿಯಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next