Advertisement

ವಿಭಜಕದ ಸರಳು ಕತ್ತಿಗೆ ನುಸುಳಿ ಒದ್ದಾಡಿ ಪ್ರಾಣ ಬಿಟ್ಟ ಸ್ಕೂಟರ್‌ ಸವಾರ

10:00 AM Mar 24, 2018 | Team Udayavani |

ತುಮಕೂರು: ಡಿವೈಡರ್‌ಗೆ ಹಾಕಿದ್ದ ಕಂಬಿಯ ಸಲಾಕೆಗೆ ತಲೆ ಸಿಲುಕಿ ವ್ಯಕ್ತಿಯೋರ್ವ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತುಮಕೂರಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48ರ ಕೈಗಾರಿಕಾ ಪ್ರದೇಶ ಅಂತರಸನಹಳ್ಳಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ. 

Advertisement

ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ಸಹಾಯಕ ಆಡಳಿತಾಧಿಕಾರಿಯಾಗಿ ಕೆಲಸ ನಿರ್ವಹಿಸಿ ನಿವೃತ್ತಿಯಾಗಿದ್ದ ರುದ್ರಪ್ಪ (65) ಮೃತರು. ಪತ್ನಿಯೊಂದಿಗೆ ಆಕ್ಟಿವಾ ಹೊಂಡಾದಲ್ಲಿ ಬರುವ ವೇಳೆ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್‌ ಪಕ್ಕ ಬರುವಾಗ ಬೈಕ್‌ನ ಆಯ ತಪ್ಪಿ ಅಪಘಾತವಾಯಿತು.

ಘಟನೆ ನಡೆದಿದ್ದು ಹೀಗೆ?
 ರುದ್ರಪ್ಪ, ತನ್ನ ಪತ್ನಿ ಮಲ್ಲಮ್ಮ ಶಿಕ್ಷಕಿಯಾಗಿದ್ದ ಹಿನ್ನೆಲೆಯಲ್ಲಿ ಶಾಲೆಯಿಂದ ಅವರನ್ನು ಮನೆಗೆ ಕರೆದುಕೊಂಡು ಬರುತ್ತಿದ್ದರು. ಈ ವೇಳೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ರಸ್ತೆಯ ಡಿವೈಡರ್‌ ಪಕ್ಕದಲ್ಲಿ ಹೋಗುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಡಿವೈಡರ್‌ಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಡಿವೈಡರ್‌ಗೆ ಹಾಕಿದ್ದ ಕಬ್ಬಿಣದ ಸಲಾಕೆಗೆ ಕುತ್ತಿಗೆ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. 

ಪತ್ನಿ ಮಲ್ಲಮ್ಮಗೆ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next