Advertisement

ನಂತೂರು: ಬಸ್‌ ಢಿಕ್ಕಿಯಾಗಿ ಸ್ಕೂಟರ್‌ ಸವಾರ ಸಾವು

10:02 PM Oct 13, 2022 | Team Udayavani |

ಮಂಗಳೂರು: ನಗರದ ನಂತೂರು ಜಂಕ್ಷನ್‌ನಲ್ಲಿ ಬುಧವಾರ ಸಂಜೆ ಬಸ್‌ ಢಿಕ್ಕಿಯಾಗಿ ಸ್ಕೂಟರ್‌ ಸವಾರ ವಿಶ್ವನಾಥ ಆಳ್ವ (68) ಅವರು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Advertisement

ಶಿವಭಾಗ್‌ ಕಡೆಯಿಂದ ಬಿಕರ್ನಕಟ್ಟೆಗೆ ಸಾಗುತ್ತಿದ್ದ ಬಸ್‌ ಅನ್ನು ನಂತೂರು ಜಂಕ್ಷನ್‌ನಲ್ಲಿ ಟ್ರಾಫಿಕ್‌ ಬಿಟ್ಟಾಗ ಚಾಲಕ ನಿರ್ಲಕ್ಷ್ಯತನದಿಂದ ಒಮ್ಮೆಲೇ ಮುಂದಕ್ಕೆ ಎಡಬದಿಗೆ ಚಲಾಯಿಸಿದ್ದು, ಈ ವೇಳೆ ಬಸ್ಸಿನ ಮುಂಭಾಗದಲ್ಲಿದ್ದ ವಿಶ್ವನಾಥ ಆಳ್ವ ಅವರ ಸ್ಕೂಟರ್‌ಗೆ ಢಿಕ್ಕಿಯಾಗಿದೆ. ಸ್ಕೂಟರ್‌ ಸಮೇತ ರಸ್ತೆಗೆ ಬಿದ್ದ ವಿಶ್ವನಾಥ ಆಳ್ವ ಅವರು ಬಸ್‌ನ ಮುಂಭಾಗದಲ್ಲಿ ಸಿಲುಕಿಕೊಂಡು ಸ್ವಲ್ಪ ದೂರ ಮುಂದಕ್ಕೆ ಬಸ್‌ನೊಂದಿಗೆ ತಳ್ಳಿಕೊಂಡು ಹೋಗಿದ್ದಾರೆ.

ಘಟನೆಯಿಂದ ಕೈ, ಕಾಲು, ದೇಹಕ್ಕೆ ಗಂಭೀರ ಗಾಯಗೊಂಡಿದ್ದ ಅವರನ್ನು ಖಾಸಗಿ ಅಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಚಾಲಕನ ವಿರುದ್ಧ ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next