Advertisement

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

11:33 PM Apr 23, 2024 | Team Udayavani |

ಹೊಸದಿಲ್ಲಿ: “ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಹಿಂದೂಗಳ ಸಂಪತ್ತನ್ನು ಕಿತ್ತುಕೊಂಡು ನುಸುಳುಕೋರರಿಗೆ, ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಹಂಚಲಿದೆ’ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆ ಸಂಬಂಧ ದೂರುಗಳು ಬಂದಿದ್ದು, ಅವುಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಚುನಾವಣ ಆಯೋಗದ ಮೂಲಗಳು ತಿಳಿಸಿವೆ.

Advertisement

ಇನ್ನೊಂದೆಡೆ ಪ್ರಧಾನಿ ಮೋದಿ ವಿರುದ್ಧ ಚುನಾವಣ ಆಯೋಗ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾಗಿ ಕಾನೂನು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್‌ ವಕ್ತಾರೆ ಸುಪ್ರಿಯಾ ಶ್ರೀನೇತ್‌ ಮಂಗಳವಾರ  ತಿಳಿಸಿದ್ದಾರೆ.

ಮೋದಿಯವರು ರಾಜಸ್ಥಾನದಲ್ಲಿ ದ್ವೇಷ ಭಾಷಣ ಮಾಡಿದ್ದಾರೆ. ಮೋದಿ ಹೇಳಿಕೆಗೆ ಸಂಬಂಧಿಸಿ ಸೋಮವಾರವೇ ಕಾಂಗ್ರೆಸ್‌ನ ನಿಯೋಗವು ಚುನಾವಣ ಆಯೋಗವನ್ನು ಭೇಟಿ ಮಾಡಿ, ದೂರು ಸಲ್ಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿತ್ತು. ಆದರೆ ಆಯೋಗವು ಮೌನ ವಹಿಸಿದೆ. ಹೀಗಾಗಿ ನಾವು ಕಾನೂನು ಹೋರಾಟದ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದಿದ್ದಾರೆ.

ಈ ನಡುವೆ ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಮೋದಿ ಗೊಂದಲ ಮೂಡಿಸಿ ಜನರ ಹಾದಿ ತಪ್ಪಿಸುತ್ತಿದ್ದಾರೆ ಎಂದು ಮಂಗಳವಾರ “ಆಲ್‌ ಇಂಡಿಯಾ ಪ್ರೊಫೆಶನಲ್ಸ್‌ ಕಾಂಗ್ರೆಸ್‌’ ಆಯೋಗಕ್ಕೆ ದೂರು ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next