Advertisement

ಪಾಕ್ ವಿರುದ್ಧ ಸೋಲಿನ ಬಳಿಕ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ದಾಳಿ

04:59 PM Oct 25, 2021 | Team Udayavani |

ಹೊಸದಿಲ್ಲಿ : ಟಿ20 ವಿಶ್ವಕಪ್‌ನಲ್ಲಿ ಭಾರತವು ಪಾಕಿಸ್ತಾನ ವಿರುದ್ಧ ಸೋತ ನಂತರ ಭಾನುವಾರ ಪಂಜಾಬ್‌ನ ಸಂಗ್ರೂರ್‌ನಲ್ಲಿರುವ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಲವು ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಲಾಗಿದೆ.

Advertisement

ಉತ್ತರಪ್ರದೇಶದಿಂದ ಬಂದ ವಿದ್ಯಾರ್ಥಿಗಳ ಗುಂಪೊಂದು ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿತು ಮತ್ತು ಅವರ ಹಾಸ್ಟೆಲ್ ಕೊಠಡಿಗಳಿಗೆ ಹಾನಿ ಮಾಡಿದೆ ಎಂದು ವರದಿಯಾಗಿದೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ದಾಳಿಗೀಡಾದ ವಿದ್ಯಾರ್ಥಿಗಳು ತಮಗಾದ ಗಾಯಗಳು, ಹಾನಿಗೊಳಗಾದ ಕೊಠಡಿಗಳ ವೀಡಿಯೊ ಮತ್ತು ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಉತ್ತರ ಪ್ರದೇಶದ ವಿದ್ಯಾರ್ಥಿಗಳೇ ಈ ದಾಳಿ ನಡೆಸಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ.

ಪಂದ್ಯದ ನಂತರ ಕೆಲವು ಘೋಷಣೆಗಳನ್ನು ಕೂಗಿದ ನಂತರ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.

ಘಟನೆ ಕುರಿತಾಗಿ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next