Advertisement

ಎಸ್‌ಡಿಎಂ ಆಯುರ್ವೇದ ಕಾಲೇಜು, ಆಸ್ಪತ್ರೆ :ವಿಶ್ವ ಅರಣ್ಯ ದಿನಾಚರಣೆ

07:58 PM Mar 28, 2019 | Sriram |

ಕಟಪಾಡಿ: ಉದ್ಯಾವರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ದ್ರವ್ಯಗುಣ ಸ್ನಾತಕೋತ್ತರ ವಿಭಾಗ ಹಾಗೂ ಸಸ್ಯೋದ್ಯಾನ ಸಮಿತಿಯ ಸಹಭಾಗಿತ್ವದಲ್ಲಿ ವಿಶ್ವ ಅರಣ್ಯ ದಿನಾಚರಣೆಯನ್ನು ಔಷಧಿ ಸಸ್ಯೋದ್ಯಾನ ರಾಜವನದಲ್ಲಿ ಆಚರಿಸಲಾಯಿತು.

Advertisement

ಸಂಪನ್ಮೂಲ ವ್ಯಕ್ತಿಯಾಗಿದ್ದ ಶಾಲಕ್ಯತಂತ್ರ ವಿಭಾಗದ ಮುಖ್ಯಸ್ಥ ಡಾ| ಕೆ. ರಾಮಚಂದ್ರ ಅವರು ಇಂದಿನ ಜೀವನ ಶೈಲಿಯಲ್ಲಿ ಪರಿಸರ ಸಂರಕ್ಷಣೆ, ಅದರ ಅವಶ್ಯಕತೆಯ ಬಗ್ಗೆ ಮಾಹಿತಿ ನೀಡಿದರು.

ಎಸ್‌ಡಿಎಂ ಸಸ್ಯೋದ್ಯಾನ ಸಮಿತಿಯ ಅಧ್ಯಕ್ಷೆ ಡಾ| ಸುಮಾ ವಿ. ಮಲ್ಯ ಅವರು ಶೆ„ಕ್ಷಣಿಕ ಕ್ಷೇತ್ರ ಹಾಗೂ ಅರಣ್ಯ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದರು. ದ್ರವ್ಯಗುಣ ವಿಭಾಗದ ಮುಖ್ಯಸ್ಥ ಡಾ| ಶ್ರೀಕಾಂತ ಪಿ. ಅರಣ್ಯ ಸಂರಕ್ಷಣೆಯ ಜವಾಬ್ದಾರಿ ಮತ್ತು ಅದರ ನಿರ್ವಹಣೆ ಬಗ್ಗೆ ತಿಳಿಸಿದರು. ಕಾಲೇಜಿನ ಉದ್ಯಾನವನದ ಸಸ್ಯಗಳಿಗೆ ನಾಮಫಲಕಗಳನ್ನು ಗಣ್ಯರು ಬಿಡುಗಡೆಗೊಳಿಸಿದರು.

ಬೇಸಗೆಯಲ್ಲಿ ಗಿಡಮರಗಳಿಗೆ ನೀರುಣಿಸುವ ಯೋಜನೆ ಉದ್ಘಾಟಿಸಲಾಯಿತು. ಪ್ರಸೂತಿ ತಂತ್ರ ವಿಭಾಗದ ಉಪನ್ಯಾಸಕಿ ಡಾ| ರಮಾದೇವಿ ಹಾಗೂ ದ್ರವ್ಯಗುಣ ವಿಭಾಗದ ಉಪನ್ಯಾಸಕ ಡಾ| ಮೊಹಮ್ಮದ್‌,ಸಲ್‌ ಇಂತಹ ಕಾರ್ಯಕ್ರಮವು ಪ್ರಕೃತಿ ಪರವಾಗಿದ್ದು ದಿನನಿತ್ಯವೂ ಅಳವಡಿಸಿಕೊಳ್ಳಬೇಕೆಂದರು. ದ್ರವ್ಯಗುಣ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ| ನಿವೇದಿತಾ ಶೆಟ್ಟಿ ಸ್ವಾಗತಿಸಿದರು. ಡಾ| ತೇಜಸ್ವಿ ನಾಯ್ಕ ವಂದಿಸಿದರು. ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿ ಡಾ| ಪಲ್ಲವಿ ಕಶ್ಯಪ್‌ ನಿರೂಪಿಸಿದರು. 2ನೇ ವರ್ಷದ ಆಯುರ್ವೆàದ ವಿದ್ಯಾರ್ಥಿಗಳು ,ದ್ರವ್ಯಗುಣ ವಿಭಾಗದ ಸ್ನಾತಕೋತ್ತರ ವಿದ್ಯಾರ್ಥಿಗಳು ಸಹಕರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next