Advertisement

ಬಾಬರಿ ತೀರ್ಪು ಖಂಡಿಸಿ ಮಂಗಳೂರಿನಲ್ಲಿ ಎಸ್ ಡಿಪಿಐ ಪ್ರತಿಭಟನೆ ಪೋಲೀಸರಿಂದ ಬಂಧನ

05:23 PM Sep 30, 2020 | sudhir |

ಮಂಗಳೂರು : ಬಾಬರಿ ತೀರ್ಪನ್ನು ಸಿಬಿಐ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದ ಹಿನ್ನೆಲೆಯಲ್ಲಿ ತೀರ್ಪನ್ನು ಖಂಡಿಸಿ ಮಂಗಳೂರು ಎಸ್ ಡಿಪಿಐ ದಕ ಜಿಲ್ಲಾ ಸಮಿತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾ ನಿರತ ಪಕ್ಷದ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಚಾರ್, ಕಾರ್ಪೋರೇಟರ್ ಮುನೀಬ್ ಬೆಂಗರೆ ಮೊದಲಾದವರನ್ನು ಪಾಂಡೇಶ್ವರ ಪೊಲೀಸರು ವಶಕ್ಕೆ ಪಡೆದುಕೊಂಡರು.

Advertisement

ಅಯೋಧ್ಯೆಯ ವಿವಾದಿತ ಕಟ್ಟಡ ಧ್ವಂಸ ಪ್ರಕರಣದ ತೀರ್ಪು ಹಿನ್ನೆಲೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. 6 KSRP, 8 CAR ತುಕಡಿಗಳ ಸಹಿತ ವಿವಿಧೆಡೆ ಪೊಲೀಸರ ನಿಯೋಜನೆ ಮಾಡಲಾಗಿತ್ತು. ವಾಹನ ತಪಾಸಣೆಗಳನ್ನು ಬಿಗಿಗೊಳಿಸಲಾಗಿತ್ತು.

ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ತೀರ್ಪು ಹೊರ ಬೀಳುತ್ತಿದ್ದಂತೆ ಎಸ್ ಡಿಪಿಐ ದಕ್ಷಿಣಕನ್ನಡ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next