Advertisement

ಮಂಗಳೂರು: ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಿದ ಎಸ್.ಡಿ.ಪಿ.ಐ

12:03 PM Apr 13, 2022 | Team Udayavani |

ಮಂಗಳೂರು: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್.ಡಿ.ಪಿ.ಐ ಕಾರ್ಯಕರ್ತರು ಸಿ.ಎಂ ಗೆ ಕಪ್ಪು ಬಾವುಟ ಪ್ರದರ್ಶಿಸಿದ ಘಟನೆ ಮಂಗಳೂರಿನ ನಗರ ಹೊರವಲಯದ ವಳಚ್ಚಿಲ್ ನಲ್ಲಿ ನಡೆದಿದೆ.

Advertisement

ಸಿ.ಎಂ ಬಸವರಾಜ ಬೊಮ್ಮಾಯಿ ಮಂಗಳೂರಿನಿಂದ ಬಂಟ್ವಾಳದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಸಚಿವ ಈಶ್ವರಪ್ಪ ಅವರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಎಸ್.ಡಿ.ಪಿ.ಐ ಕಾರ್ಯಕರ್ತರು ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಿ ಧಿಕ್ಕಾರ ಕೂಗಿದರು.

ತಕ್ಷಣ ಪ್ರತಿಭಟನಾಕಾರರನ್ನು ಪೊಲೀಸರು, ಮುಖ್ಯಮಂತ್ರಿ ಭದ್ರತಾ ಸಿಬ್ಬಂದಿಗಳು  ಚದುರಿಸಿ,ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಯತ್ನಿಸಿದರು.

ಇದನ್ನೂ ಓದಿ:ಆಧಾರ ರಹಿತ ದೂರಿಗೆ ಮಾನ್ಯತೆ ಕೊಡಲು ಸಾಧ್ಯವೇ?: ಸಚಿವ ಡಾ. ಕೆ. ಸುಧಾಕರ್‌

Advertisement

ಗುತ್ತಿಗೆದಾರ ಸಂತೋಷ್ ಪಾಟೀಲ್ 40% ಕಮಿಷನ್ ಆರೋಪ ಹಾಕಿ, ಉಡುಪಿಯ ಖಾಸಗಿ ಹೊಟೇಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಚಿವ ಈಶ್ವರಪ್ಪ ಅವರ ಮೇಲೆ ಕ್ರಮಕ್ಕೆ ಆಗ್ರಹಿಸಿ ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಯುತ್ತಿದೆ.

ಈಗಾಗಲೇ ಈ ಪ್ರಕರಣದಲ್ಲಿ ಪೊಲೀಸರು ಸಂತೋಷ್ ಪಾಟೀಲ್ ಸಹೋದರ ಪ್ರಶಾಂತ್ ಪಾಟೀಲ್ ಕೊಟ್ಟ ದೂರಿನ ಮೇಲೆ ಸಚಿವ ಈಶ್ವರಪ್ಪ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next