Advertisement

ಪ್ರವಾದಿ ನಿಂದನೆ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

02:54 PM Jun 11, 2022 | Team Udayavani |

ಮಂಡ್ಯ: ಪ್ರವಾದಿ ಮಹಮದ್‌ ಅವರನ್ನು ನಿಂದನೆ ಮಾಡಿರುವ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್‌ ಶರ್ಮ, ಬಿಜೆಪಿ ಮಾಧ್ಯಮ ಉಸ್ತುವಾರಿ ನವೀನ್‌ ಜಿಂದಾಲ್‌ ಅವರನ್ನು ಬಂ ಧಿಸುವ ಮೂಲಕ ಬಿಜೆಪಿ ಸರ್ಕಾರವೇ ರಾಜೀನಾಮೆ ನೀಡಬೇಕು ಎಂದು ಸೋಷಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾದ ಕಾರ್ಯಕರ್ತರು ಪ್ರತಿಭಟಿಸಿದರು.

Advertisement

ನಗರದ ಸರ್‌ಎಂವಿ ಪ್ರತಿಮೆ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇವರ ನಿಂದನೆಯಿಂದ ರಾಷ್ಟ್ರಮಟ್ಟದಲ್ಲಿಯೇ ಭಾರತ ದೇಶದ ಘನತೆ ಹಾಳಾಗಿದೆ. ಆದ್ದರಿಂದ ಇಡೀ ಬಿಜೆಪಿ ಸರ್ಕಾರವೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಸರ್ಕಾರ ಬಂದಾಗಿನಿಂದಲೂ ದೇಶದಲ್ಲಿ ಅಲ್ಪಸಂಖ್ಯಾತರು, ದಲಿತ, ಹಿಂದುಳಿದವರ ವಿರೋಧಿ ಅಲೆ ಸೃಷ್ಟಿಸಲಾಗುತ್ತಿದೆ. ದೇಶದಲ್ಲಿ ಮುಸ್ಲಿಂ ವಿರೋಧಿ  ಚಟುವಟಿಕೆಗಳಿಗೆ ಬಿಜೆಪಿ ಸರ್ಕಾರ ಮೌನ ಸಮ್ಮತಿ ನೀಡುತ್ತಿದ್ದು, ಆಡಳಿತಾತ್ಮಕ ಸಹಕಾರ ನೀಡುತ್ತಿದೆ ಎಂದು ಕಿಡಿಕಾರಿದರು.

ಹಿಜಾಬ್‌, ಹಲಾಲ್‌, ವ್ಯಾಪಾರ ನಿಷೇಧ, ಆಜಾನ್‌, ಮಸೀದಿ, ಈದ್ಗಾಗಳ ವಿವಾದ ಸೃಷ್ಟಿ ಸೇರಿ ನಿರಂತರವಾಗಿ ಮುಸ್ಲಿಂ ಧಾರ್ಮಿಕ ವಿಚಾರಗಳಲ್ಲಿ ಸಂಘರ್ಷ ನಡೆಸುತ್ತಿದ್ದು, ಎಲ್ಲ ಸಂದರ್ಭದಲ್ಲೂ ಕಾನೂನಾತ್ಮಕ ಕ್ರಮ ಕೈಗೊಳ್ಳದೆ, ಖಂಡಿಸುವ ಮಾತುಗಳನ್ನಾದರೂ ಆಡದ ಬಿಜೆಪಿ ಸರ್ಕಾರ, ಪ್ರವಾದಿ ನಿಂದನೆಯ ಪ್ರಕರಣದಲ್ಲೂ ಅಂತಾರಾಷ್ಟ್ರೀಯ ಒತ್ತಡಕ್ಕೆ ಮಣಿದು ಕೇವಲ ವಜಾ ಮಾಡುವ ಕಣ್ಣೊರೆಸುವ ತಂತ್ರ ಅನುಸರಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರವಾದಿ ಮಹಮ್ಮದ್‌ ನಿಂದನೆಯನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ನೂಪುರ್‌ ಶರ್ಮಾ ಹಾಗೂ ನವೀನ್‌ ಜಿಂದಾಲ್‌ ಅವರನ್ನು ಬಂಧಿ ಸಬೇಕು. ಇಡೀ ರಾಷ್ಟ್ರಮಟ್ಟದಲ್ಲಿ ದೇಶದ ಘನತೆಗೆ ಧಕ್ಕೆ ಉಂಟು ಮಾಡಿರುವ ಬಿಜೆಪಿ ಸರ್ಕಾರ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

Advertisement

ಸಂಘಟನೆಯ ಅಧ್ಯಕ್ಷ ಸಾದತ್‌ ಪಾಷ, ಉಪಾಧ್ಯಕ್ಷ ಆರ್‌.ಕೆ.ರಹೀಂ, ಮೊಕ್ತಾರ್‌ ಅಹಮದ್‌, ಮತ್ತಿತರರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next