Advertisement

ಸೆ. 23: ಅನರ್ಹ ಶಾಸಕರ ಅರ್ಜಿಯ ವಿಚಾರಣೆ

08:08 AM Sep 18, 2019 | sudhir |

ಹೊಸದಿಲ್ಲಿ: ಕರ್ನಾಟಕದ 17 ಅನರ್ಹ ಶಾಸಕರ ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆಯಾಗಿದೆ. ಸುಪ್ರೀಂ ಕೋರ್ಟ್‌ನ ನ್ಯಾಯಪೀಠದಲ್ಲಿದ್ದ, ಕರ್ನಾಟಕ ಮೂಲದ ನ್ಯಾ| ಮೋಹನ ಎಂ. ಶಾಂತನಗೌಡರ್‌ ವಿಚಾರಣ ಪ್ರಕ್ರಿಯೆಯಿಂದ ಹಿಂದೆ ಸರಿದಿದ್ದು, ಸೆ.23ಕ್ಕೆ ವಿಚಾರಣೆ ಮುಂದೂಡಲಾಗಿದೆ.
ನ್ಯಾ| ಎನ್‌.ವಿ. ರಮಣ ಅವರ ನೇತೃತ್ವದ ಪೀಠ ಮಂಗಳವಾರ ಅರ್ಜಿ ಕೈಗೆತ್ತಿಕೊಳ್ಳುತ್ತಿದ್ದಂತೆ, ನ್ಯಾ| ಶಾಂತನಗೌಡರ್‌, ವಿಚಾರಣ ಪ್ರಕ್ರಿಯೆಯಿಂದ ಹಿಂದೆ ಸರಿಯುವ ಬಗ್ಗೆ ಹೇಳಿದರು. ಆದರೆ ಈ ಬಗ್ಗೆ ಹೆಚ್ಚಿನ ವಿವರಣೆ ನೀಡದ ಅವರು, ನನ್ನ ಆತ್ಮಸಾಕ್ಷಿ ವಿಚಾರಣ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅನುಕೂಲ ಮಾಡಿಕೊಡುತ್ತಿಲ್ಲ ಎಂದು ಹೇಳಿದರು.

Advertisement

ಹಿರಿಯ ನ್ಯಾಯವಾದಿಗಳಾದ ಕಪಿಲ್‌ ಸಿಬಲ್‌ ಮತ್ತು ಮುಕುಲ್‌ ರೋಹrಗಿ ಅವರು, ಪೀಠದಲ್ಲಿ ನ್ಯಾ| ಶಾಂತನಗೌಡರ್‌ ಇದ್ದರೆ ನಮಗೇನೂ ಸಮಸ್ಯೆ ಇಲ್ಲ ಎಂದು ಹೇಳಿದರೂ ಅವರು ಕೇಳಲಿಲ್ಲ.

ನ್ಯಾ| ಶಾಂತನಗೌಡರ್‌ 2003ರ ಮೇ 12ರಲ್ಲಿ ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿದ್ದರು. 2004ರ ಸೆ.24ರಂದು ಅವರನ್ನು ಪೂರ್ಣ ಪ್ರಮಾಣದ ನ್ಯಾಯಮೂರ್ತಿಯನ್ನಾಗಿ ನೇಮಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next