ಲಸಿಕಾಕರಣದಲ್ಲಿ ನಿಗದಿತ ಗುರಿಯಂತೆ ಶೇ.91.4 ಪ್ರಗತಿ ಸಾಧಿಸುವ ಮೂಲಕ ರಾಜ್ಯಮಟ್ಟದ ಪಟ್ಟಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಪ್ರಸ್ತುತ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.
Advertisement
ಈ ಕುರಿತು ಬುಧವಾರ “ಉದಯ ವಾಣಿ’ಗೆ ಮಾಹಿತಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರ ನಿರ್ದೇಶನದಂತೆ 18 ವರ್ಷ ಮೇಲ್ಪಟ್ಟವರೆಲ್ಲರಿಗೆ ಲಸಿಕಾ ಕರಣ ಮಾಡಲು ಜಿಲ್ಲಾಡಳಿತ ಕಳೆದ ವರ್ಷದ ಜ.16 ರಿಂದ ಲಸಿಕಾಕರಣ ಪ್ರಾರಂಭಿಸಿತು ಎಂದರು.
ಪ್ರಗತಿಯನ್ನು (ಜ.19ಕ್ಕೆ) ಸಾಧಿಸಲಾಗಿದೆ. ಎರಡನೇ ಡೋಸ್ ಲಸಿಕೆ ಪಡೆಯಲು ಜ.19ಕ್ಕೆ ಜಿಲ್ಲೆಯಲ್ಲಿ 53,313 ಜನ ಬಾಕಿ ಇದ್ದಾರೆ. ಒಂದೆರೆಡು ದಿನಗಳಲ್ಲಿ ಲಸಿಕೆ ಪೂರ್ಣಗೊಳಿಸಲು ಹಾಗೂ
ಎರಡನೇ ಡೋಸ್ ಲಸಿಕೆ ಪಡೆಯಲು ಮುಂದಿನ ದಿನ ಗಳಲ್ಲಿ ಅರ್ಹರಾಗುವವರಿಗೆ ಲಭ್ಯವಾಗುವ ದಿನಾಂಕದಂದೇ ಲಸಿಕೆ ನೀಡಲು ಸಂಬಂಧ ಪಟ್ಟವರಿಗೆ ಸೂಚನೆ ನೀಡಲಾಗಿದೆ ಎಂದರು. ಸಹಕಾರಕ್ಕೆ ಕೃತಜ್ಞತೆ : ಜಿಲ್ಲೆಯಲ್ಲಿ ಲಸಿಕಾಕರಣ ಯಶಸ್ವಿಗೆ ಅಹರ್ನಿಶಿ ಶ್ರಮಿಸಿದ ಆರೋಗ್ಯ, ಆಶಾ, ಅಂಗನವಾಡಿ ಕಾರ್ಯಕರ್ತರು, ಗ್ರಾಮ ಮತ್ತು ವಾರ್ಡ್ ಮಟ್ಟದ ಕೋವಿಡ್
ನಿಯಂತ್ರಣ ಟಾಸ್ಕ್ ಫೋರ್ಸ್ ಸಮಿತಿಯ ಸದಸ್ಯರು, ಜಿಲ್ಲಾಡಳಿತದ ಎಲ್ಲಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಜಿಲ್ಲಾಧಿಕಾರಿ ಧನ್ಯವಾದ ತಿಳಿಸಿದ್ದಾರೆ. ಅಲ್ಲದೇ, ವಿಶೇಷವಾಗಿ ಜಿಲ್ಲಾ ಉಸ್ತುವಾರಿ ಸಚಿವರ ದಿನ ನಿತ್ಯದ ಮಾರ್ಗದರ್ಶನ ಹಾಗೂ ಸಹಕಾರವೇ ಪ್ರಮುಖ ಯಶಸ್ವಿಗೆ ಪ್ರಮುಖ ಕಾರಣ ಎಂದು ಕೃತಜ್ಞತೆ ತಿಳಿಸಿದರು.
Related Articles
Advertisement
ಎರಡನೇ ಡೋಸ್ ಲಸಿಕೆ: ಮೊದಲನೇ ಡೋಸ್ ಲಸಿಕೆ ಪಡೆದು ಎರಡನೇ ಡೋಸ್ ಲಸಿಕೆ ಪಡೆಯಲು (ಪ್ರಸ್ತುತ ಇಂದಿನ ದಿನಾಂಕಕ್ಕೆ) ಜಿಲ್ಲೆಯಲ್ಲಿ ಒಟ್ಟು 15,313 ಮಂದಿ ಬಾಕಿಉಳಿದಿದ್ದಾರೆ. ಈ ಪೈಕಿ ತಾಲೂಕುವಾರು ಬಾಗೇಪಲ್ಲಿ 1967, ಚಿಕ್ಕಬಳ್ಳಾಪುರ 4648, ಚಿಂತಾಮಣಿ 806, ಗೌರಿಬಿದನೂರು 6308, ಗುಡಿಬಂಡೆ 367 ಹಾಗೂ ಶಿಡ್ಲಘಟ್ಟ ತಾಲೂಕಿನಲ್ಲಿ 1217,
ಮಂದಿ ಬಾಕಿ ಇರುತ್ತಾರೆ. ಲಸಿಕೆಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ಸೂಚಿಸಲಾಗಿದೆ. ಎರಡನೇ ಡೋಸ್ ಲಸಿಕೆ ಪಡೆಯಲು ಜಿಲ್ಲೆಯಲ್ಲಿ ಅರ್ಹರಿರುವ ಜನ ಹಾಗೂ ಮುಂದೆ
ಅರ್ಹರಾಗುವವರು ಕೂಡಲೇ ಸಮೀಪದ ಲಸಿಕಾ ಕೇಂದ್ರಗಳಿಗೆ ತೆರಳಿ ಲಸಿಕೆ ಹಾಕಿಸಿಕೊಂಡು ರಾಜ್ಯದಲ್ಲಿಯೇ ಚಿಕ್ಕಬಳ್ಳಾಪುರ ಜಿಲ್ಲೆ ಶೇ.100 ಪ್ರಗತಿ ಸಾಧಿಸಿದ ಮೊದಲ ಜಿಲ್ಲೆಯಾಗಿ ಹೊರ
ಹೊಮ್ಮಲು ಕಾರಣವಾಗಬೇಕು ಎಂದು ಮನವಿ ಮಾಡಿದರು.