Advertisement

ದ್ವಿತೀಯ ಏಕದಿನ: ಭಾರತದ ಬ್ಯಾಟಿಂಗ್ ಲೈನ್ ಅಪ್ ನಲ್ಲಿ ಮತ್ತೆ ಬದಲಾವಣೆ

10:11 AM Jan 18, 2020 | keerthan |

ರಾಜಕೋಟ್: ಪ್ರವಾಸಿ ಆಸೀಸ್ ವಿರುದ್ಧದ ದ್ವಿ ತೀಯ ಏಕದಿನ ಪಂದ್ಯದಲ್ಲೂ ಟಾಸ್ ಗೆದ್ದ ಆಸೀಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಮೊದಲ ಪಂದ್ಯವನ್ನು ಕಳೆದುಕೊಂಡಿರುವ ಭಾರತ ಈ ಪಂದ್ಯದಲ್ಲಿ ತಿರುಗಿ ಬೀಳುವ ವಿಶ್ವಾಸದಲ್ಲಿದ್ದಾರೆ.

Advertisement

ಕಳೆದ ಪಂದ್ಯದಲ್ಲಿ ಗಾಯಮಾಡಿಕೊಂಡಿದ್ದ ಕೀಪರ್ ರಿಷಭ್ ಪಂತ್ ಹೊರಬಿದ್ದ ಕಾರಣ ರಾಜಕೋಟ್ ನಲ್ಲೂ ಕೆ ಎಲ್ ರಾಹುಲ್ ವಿಕೆಟ್ ಕೀಪಿಂಗ್ ಜವಾಬ್ದಾರಿ ನಿಭಾಯಿಸಲಿದ್ದಾರೆ. ರಿಷಭ್ ಬದಲಿಗೆ ಮನೀಶ್ ಪಾಂಡೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಉಳಿದಂತೆ ವೇಗಿ ಶಾರ್ದೂಲ್ ಠಾಕೂರ್ ಬದಲಿಗೆ ಯುವ ವೇಗಿ ನವದೀಪ್ ಸೈನಿಗೆ ಆಡುವ ಬಳಗದಲ್ಲಿ ಅವಕಾಶ ನೀಡಲಾಗಿದೆ.

ಆಸೀಸ್ ಬಳಗದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಮುಂಬೈ ಪಂದ್ಯವಾಡಿದ್ದ ತಂಡವನ್ನೇ ಉಳಿಸಲಾಗಿದೆ.

ರಿಷಭ್ ಪಂತ್ ಗಾಯಗೊಂಡಿರುವ ಕಾರಣ ಕೆ ಎಸ್ ಭರತ್ ಅವರನ್ನು ಹೆಚ್ಚುವರಿ ವಿಕೆಟ್ ಕೀಪರ್ ಆಗಿ ಕರೆಸಿಕೊಳ್ಳಲಾಗಿದೆ. ಆದರೆ ಇಂದಿನ ಪಂದ್ಯದಲ್ಲಿ ಸ್ಥಾನ ಪಡೆದಿಲ್ಲ.

Advertisement

ಭಾರತ: ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ, ಕೆ ಎಲ್ ರಾಹುಲ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ನವದೀಪ್ ಸೈನಿ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ.

ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಆರೋನ್ ಫಿಂಚ್, ಮಾರ್ನಸ್ ಲ್ಯಾಬುಶೇನ್, ಸ್ಟೀವ್ ಸ್ಮಿತ್, ಆಶ್ಟನ್ ಟರ್ನರ್, ಅಲೆಕ್ಸ್ ಕ್ಯಾರಿ, ಆಶ್ಟನ್ ಅಗರ್, ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ಕೇನ್ ರಿಚರ್ಡ್ ಸನ್, ಆಡಂ ಜಂಪಾ.

Advertisement

Udayavani is now on Telegram. Click here to join our channel and stay updated with the latest news.

Next