Advertisement

ದ್ವಿತೀಯ ಪಿಯು ಪರೀಕ್ಷೆ: ಗ್ರಾ.ಪಂ. ಅಧ್ಯಕ್ಷೆ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ!

12:16 AM Apr 23, 2023 | Team Udayavani |

ಪುತ್ತೂರು: ಪಾಣಾಜೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಭಾರತಿ ಭಟ್‌ 24 ವರ್ಷಗಳ ಬಳಿಕ ದ್ವಿತೀಯ ಪಿಯು ಪರೀಕ್ಷೆಯನ್ನು ಖಾಸಗಿಯಾಗಿ ಬರೆದು 421 ಅಂಕಗಳೊಂದಿಗೆ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕಳೆದ ಬಾರಿ ಎಸೆಸೆಲ್ಸಿ ಪರೀಕ್ಷೆಯನ್ನು ಖಾಸಗಿಯಾಗಿ ಬರೆದು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದರು.

Advertisement

ಬಡ ಕುಟುಂಬದಲ್ಲಿ ಜನಿಸಿದ್ದ ಭಾರತಿ 1997-98ರಲ್ಲಿ 8ನೇ ತರಗತಿ ತೇರ್ಗಡೆ ಹೊಂದಿದ್ದು, ತಂದೆಯ ವಿಯೋಗದಿಂದಾಗಿ ವಿದ್ಯಾಭ್ಯಾಸ ಮುಂದುವರಿಸಲಾಗಲಿಲ್ಲ. ಅನಂತರ ವೆಂಕಟ್ರಮಣ ಭಟ್‌ ಅವರನ್ನು ವಿವಾಹವಾಗಿ ಪಾಣಾಜೆಯಲ್ಲಿ ನೆಲೆಸಿರುವ ಅವರು 2020-21ನೇ ಸಾಲಿನ ಗ್ರಾ.ಪಂ. ಚುನಾ ವಣೆಯಲ್ಲಿ ಸದಸ್ಯೆ ಯಾಗಿ ಆಯ್ಕೆಯಾಗಿ 2 ವರ್ಷ ಗಳಿಂದ ಪಾಣಾಜೆ ಗ್ರಾ.ಪಂ. ಅಧ್ಯಕ್ಷೆಯಾಗಿದ್ದಾರೆ.

ಬೆಳ್ತಂಗಡಿಯ ಕೊಯ್ಯೂರು ಪ.ಪೂ. ಕಾಲೇಜಿನ ಪ್ರಾಚಾರ್ಯ ರಾಗಿರುವ ಪಾಣಾಜೆಯ ಬಾಲಕೃಷ್ಣ ಬೇರಿಕೆ ಅವರ ಮಾರ್ಗದರ್ಶನ ದೊಂದಿಗೆ 2021-22ನೇ ಸಾಲಿನ 10ನೇ ತರಗತಿಯ ಪರೀಕ್ಷೆ ಬರೆದು ಶೇ. 54 ಅಂಕ ಗಳಿಸಿದ್ದರು.

ಪದವಿ ಗುರಿ
ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯ ನಿರೀಕ್ಷೆ ಇರಲಿಲ್ಲ. ಬಾಲ್ಯದಲ್ಲಿ ಸಿಗದಿರುವುದನ್ನು ಈಗ ಪಡೆದಿದ್ದೇನೆ. ಮುಂದೆ ಪದವಿ ಪಡೆಯುವ ಗುರಿ ಹೊಂದಿ
ದ್ದೇನೆ ಎನ್ನುತ್ತಾರೆ ಭಾರತಿ ಭಟ್‌.

Advertisement

Udayavani is now on Telegram. Click here to join our channel and stay updated with the latest news.

Next