Advertisement

ದ್ವಿತೀಯ ಟಿ20: ಸಿಡ್ನಿ ಅಂಗಳದಲ್ಲಿ ಟಾಸ್ ಗೆದ್ದ ಭಾರತ; ಆಸೀಸ್ ಗೆ ಬದಲಿ ನಾಯಕ

01:34 PM Dec 06, 2020 | keerthan |

ಸಿಡ್ನಿ: ಮೊದಲ ಟಿ20 ಪಂದ್ಯ ಗೆದ್ದ ಹುರುಪಿನಲ್ಲಿರುವ ಟೀಂ ಇಂಡಿಯಾ ಎರಡನೇ ಪಂದ್ಯಕ್ಕೆ ಸಜ್ಜಾಗಿದೆ. ಈ ಪ್ರವಾಸದಲ್ಲಿ ಸಿಡ್ನಿ ಅಂಗಳದಲ್ಲಿ ಇದೇ ಮೊದಲ ಬಾರಿಗೆ ಟಾಸ್ ಗೆದ್ದ ವಿರಾಟ್ ಕೊಹ್ಲಿ ಮೊದಲು ಫೀಲ್ಡಿಂಗ್ ಮಾಡಲು ನಿರ್ಧರಿಸಿದ್ದಾರೆ.

Advertisement

ಆಸೀಸ್ ನಾಯಕ ಆರೋನ್ ಫಿಂಚ್ ಗಾಯಗೊಂಡಿರುವ ಕಾರಣ ಇಂದಿನ ಪಂದ್ಯದಲ್ಲಿ ಕಾಂಗರೂ ತಂಡವನ್ನು ಮ್ಯಾಥ್ಯೂ ವೇಡ್ ಮುನ್ನಡೆಸಲಿದ್ದಾರೆ. ಉಳಿದಂತೆ ಸ್ಟಾರ್ಕ್ ಮತ್ತು ಹ್ಯಾಜಲ್ ವುಡ್ ಹೊರಗುಳಿದಿದ್ದು, ಸ್ಟೊಯಿನಸ್, ಸ್ಯಾಮ್ಸ್ ಮತ್ತು ಟೈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಭಾರತದ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದೆ. ವೇಗಿ ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಲಾಗಿದೆ. ಅವರ ಬದಲಿಗೆ ಶಾರ್ದೂಲ್ ಠಾಕೂರ್ ಗೆ ಜಾಗ ನೀಡಲಾಗಿದೆ. ಕನ್ನಡಿಗ ಮನೀಷ್ ಪಾಂಡೆ ಗಾಯಗೊಂಡಿದ್ದು, ಶ್ರೇಯಸ್ ಅಯ್ಯರ್ ತಂಡಕ್ಕೆ ಮರಳಿದ್ದಾರೆ. ಉಳಿದಂತೆ ಜಡೇಜಾ ಬದಲು ಚಾಹಲ್ ಸ್ಥಾನ ಪಡೆದಿದ್ದಾರೆ.

ಭಾರತ: ಶಿಖರ್‌ ಧವನ್‌, ಕೆ.ಎಲ್‌. ರಾಹುಲ್‌, ವಿರಾಟ್‌ ಕೊಹ್ಲಿ (ನಾಯಕ), ಶ್ರೇಯಸ್‌ ಅಯ್ಯರ್‌, ಸಂಜು ಸ್ಯಾಮ್ಸನ್‌, ಹಾರ್ದಿಕ್‌ ಪಾಂಡ್ಯ, ಯಜುವೇಂದ್ರ ಚಹಲ್‌, ವಾಷಿಂಗ್ಟನ್‌ ಸುಂದರ್‌, ಶಾರ್ದೂಲ್‌ ಠಾಕೂರ್‌, ದೀಪಕ್ ಚಾಹರ್, ಟಿ. ನಟರಾಜನ್‌.

ಆಸ್ಟ್ರೇಲಿಯ: ಮ್ಯಾಥ್ಯೂ ವೇಡ್‌ (ನಾಯಕ), ಡಿ ಆರ್ಸಿ ಶಾರ್ಟ್, ಮಾರ್ಕಸ್ ಸ್ಟೋಯಿನಿಸ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್ ವೆಲ್, ಮೊಯಿಸಸ್ ಹೆನ್ರಿಕ್ಸ್, ಡೇನಿಯಲ್ ಸ್ಯಾಮ್ಸ್, ಸೀನ್ ಅಬಾಟ್, ಮಿಚೆಲ್ ಸ್ವೆಪ್ಸನ್, ಆಡಮ್ ಜಂಪಾ, ಆಂಡ್ರ್ಯೂ ಟೈ

Advertisement
Advertisement

Udayavani is now on Telegram. Click here to join our channel and stay updated with the latest news.

Next