Advertisement

ಎಸ್.ಎಸ್.ಎಲ್.ಸಿಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಅಕ್ಷತ್ ಸಾಯಿನಾಥ್ ಅವರಿಗೆ ಸನ್ಮಾನ

03:58 PM Sep 05, 2021 | Team Udayavani |

ದಾಂಡೇಲಿ : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ನಗರದ ಸೆಂಟ್ ಮೈಕಲ್ ಕಾನ್ವೆಂಟ್ ಪ್ರೌಢಶಾಲೆಯ ವಿದ್ಯಾರ್ಥಿ ಹಾಗೂ ನಗರದ ಅಂಬೇವಾಡಿ ನಿವಾಸಿಯಾಗಿರುವ ಸಾಯಿನಾಥ್ ಪಡವಳಕರ ಅವರ ಸುಪುತ್ರ ಅಕ್ಷತ್ ಪಡವಳಕರನನ್ನು ಹಳಿಯಾಳ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

Advertisement

ಇದನ್ನೂ ಓದಿ:ಕೋಚ್ ರವಿ ಶಾಸ್ತ್ರೀಗೆ ಕೋವಿಡ್ ಪಾಸಿಟಿವ್: ಶಾಸ್ತ್ರೀ ಸೇರಿ ನಾಲ್ಕು ಮಂದಿ ಐಸೋಲೇಶನ್ ಗೆ

ಕ್ಷೇತ್ರ ಶಿಕ್ಷಣಾಧಿಕಾರಿ ಸಮೀರ್ ಮುಲ್ಲಾರವರ ನೇತೃತ್ವದಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಜನಪ್ರತಿನಿಧಿಗಳು ಹಾಗೂ ಶಿಕ್ಷಕರ ಸಂಘದ ಪದಾಧಿಕಾರಿಗಳು, ಶಿಕ್ಷಕರು ಉಪಸ್ಥಿತರಿದ್ದರು. ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅಕ್ಷತ್ ಪಡವಳಕರ್ 625 ಕ್ಕೆ 623 ಅಂಕಗಳನ್ನು ಪಡೆದುಕೊಂಡಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

Advertisement

Udayavani is now on Telegram. Click here to join our channel and stay updated with the latest news.

Next