Advertisement

ವಿಧಾನಸೌಧದ ಸುತ್ತ ನಿಷೇಧಾಜ್ಞೆ: ಪೊಲೀಸ್‌ ಸರ್ಪಗಾವಲು

01:58 PM Jul 12, 2019 | Team Udayavani |

ಬೆಂಗಳೂರು: ಶಾಸಕರ ರಾಜೀನಾಮೆ ಬೆನ್ನಲ್ಲೇ ರಾಜ್ಯದ ಸಮ್ಮಿಶ್ರ ಸರ್ಕಾರದ ಫೈನಲ್‌ ಕೌಂಟ್‌ ಡೌನ್‌ ಶುರುವಾಗಿರುವ ಹಿನ್ನಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಇಂದಿನಿಂದ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

Advertisement

ಕಮಿಷನರ್‌ ಅಲೋಕ್‌ ಕುಮಾರ್‌ ಅವರು ಇಂದಿನಿಂದ ಜುಲೈ 14 ರ ವರೆಗೆ ಸೆಕ್ಷನ್‌ 144 ಜಾರಿ ಮಾಡಿ ದ್ದಾರೆ.

ಶಕ್ತಿಸೌಧದಲ್ಲಿ ಇಂದು ಬೆಳಗ್ಗೆ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿರುವ ಹಿನ್ನಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ವಿಧಾನಸೌಧದ ಸುತ್ತ ಭದ್ರತೆಗೆ ನಿಯೋಜಿಸಲಾಗಿದೆ. ಹಲವು ಪೊಲೀಸರು ಮಫ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next