Advertisement

ಪೌರತ್ವ ಪ್ರತಿಭಟನೆ: ಕೊಡಗಿನಲ್ಲೂ ನಿಷೇಧಾಜ್ಞೆ, ಅಂಗಡಿ ಮುಂಗಟ್ಟು ಬಂದ್

10:06 AM Dec 21, 2019 | keerthan |

ಮಡಿಕೇರಿ: ಪೌರತ್ವ ತಿದ್ದುಪಡಿ ಕಾಯ್ದೆಯ ವಿರೋಧಿ ಪ್ರತಿಭಟನೆಯ ಕಾವು ಕೊಡಗಿಗೂ ಹಬ್ಬಿದ್ದು, ಜಿಲ್ಲೆಯಾದ್ಯಂತ 144 ಸೆಕ್ಷನ್ ನಿಷೇಧಾಜ್ಞೆ ಹೇರಲಾಗಿದೆ.

Advertisement

ಮಂಗಳೂರಿನಲ್ಲಿ ಪ್ರತಿಭಟನೆಯು ಹಿಂಸಾರೂಪಕ್ಕೆ ತಿರುಗಿದ ಬೆನ್ನಲ್ಲೇ ನೆರೆ ಜಿಲ್ಲೆ ಕೊಡಗಿನಲ್ಲೂ ಬಿಗು ಭದ್ರತೆ ಕೈಗೊಳ್ಳಲಾಗಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಸೆಕ್ಷನ್ 144 ಜಾರಿ ಮಾಡಲಾಗಿದೆ.

ಸೆಕ್ಷನ್ 144 ಜಾರಿ ಮಾಡಿರುವ ಕಾರಣ ಸಾರ್ವಜನಿಕ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಜನರಿಗಿಂತ ಹೆಚ್ಚಿನ ಜನರು ಗುಂಪು ಗೂಡುವಂತಿಲ್ಲ.

ಮಡಿಕೇರಿ ನಗರದಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ. ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next