Advertisement

ಜೂ.27ರ ತನಕ ಮಂಗಳೂರು ಕಮಿಷನರೆಟ್‌ ವ್ಯಾಪ್ತಿಗೂ ನಿಷೇಧಾಜ್ಞೆ ವಿಸ್ತರಣೆ

03:08 PM Jun 22, 2017 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಪುತ್ತೂರು, ಸುಳ್ಯ,ಬೆಳ್ತಂಗಡಿ ತಾಲೂಕುಗಳಲ್ಲಿ ಸಿಆರ್‌ಪಿಸಿ ಸೆಕ್ಷನ್‌ 144 ಅನ್ವಯ ಹೇರಲಾಗಿದ್ದ ನಿಷೇಧಾಜ್ಞೆಯನ್ನು ಜೂ. 27ರ ಮಧ್ಯರಾತ್ರಿ 12 ಗಂಟೆ ತನಕ ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಗೂ ಗುರುವಾರ ವಿಸ್ತರಿಸಲಾಗಿದೆ.  

Advertisement

ಈ ಹಿಂದೆ ಜಾರಿಯಲ್ಲಿದ್ದ ನಿಷೇಧಾಜ್ಞೆಯನ್ನು ಜೂ. 14ರಿಂದ ಜೂ. 21ರ ತನಕ ವಿಸ್ತರಿಸಲಾಗಿತ್ತು. ಬುಧವಾರ ಬಂಟ್ವಾಳ ತಾಲೂಕು ಬೆಂಜನಪದವಿನಲ್ಲಿ ಅಶ್ರಫ್‌ ಅವರ ಕೊಲೆ ಕೃತ್ಯ ಸಂಭವಿಸಿದ ಹಿನ್ನೆಲೆಯಲ್ಲಿ ನಿಷೇಧಾಜ್ಞೆಯನ್ನು 7 ದಿನಗಳ ಕಾಲ ವಿಸ್ತರಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾಯೂ ಆದ ಡಾ| ಕೆ.ಜಿ. ಜಗದೀಶ್‌ ಅವರು ಆದೇಶ ಹೊರಡಿಸಿದ್ದಾರೆ.

ಜನರು ಗುಂಪು ಕೂಡುವುದನ್ನು,ಆಯುಧ ಗಳನ್ನು ಒಯ್ಯುವುದು, ಘೋಷಣೆ ಕೂಗುವುದು, ಮೆರವಣಿಗೆ ನಡೆಸುವುದನ್ನು ನಿಷೇಧಿಸಲಾಗಿದೆ

Advertisement

Udayavani is now on Telegram. Click here to join our channel and stay updated with the latest news.

Next