Advertisement

Anantnag ಜಿಲ್ಲೆಯಲ್ಲಿ ಮುಂದುವರಿದ ಕಾರ್ಯಾಚರಣೆ- ಉಗ್ರರ ಸುತ್ತುವರಿದ ಭದ್ರತಾ ಪಡೆ

11:38 PM Sep 14, 2023 | Team Udayavani |

ಶ್ರೀನಗರ: ಬುಧವಾರ ದೇಶದ ನಾಲ್ವರು ಯೋಧರ ಸಾವಿಗೆ ಕಾರಣರಾದ ಉಗ್ರರ ಹೆಡೆಮುರಿ ಕಟ್ಟಲು ಪಣ ತೊಟ್ಟಿರುವ ಭದ್ರತಾ ಪಡೆಗಳು ಗುರುವಾರ ಇಡೀ ದಿನ ಕಾರ್ಯಾಚರಣೆ ನಡೆಸಿವೆ. ದಕ್ಷಿಣ ಕಾಶ್ಮೀರದ ಅನಂತ್‌ನಾಗ್‌ ಜಿಲ್ಲೆಯ ಪರ್ವತ ಪ್ರದೇಶದಲ್ಲಿ ಅಡಗಿದ್ದ ಲಷ್ಕರ್‌ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಸುತ್ತುವರಿದಿವೆ. ದಟ್ಟಾರಣ್ಯದ ಮೇಲೆ ಹೆಲಿಕಾಪ್ಟರ್‌ಗಳು ಸುತ್ತುತ್ತಾ ಉಗ್ರರ ಚಲನವಲನಗಳ ಮೇಲೆ ನಿಗಾ ವಹಿಸಿವೆ. ಗುರುವಾರ ಇಡೀ ದಿನ ಕಾರ್ಯಾಚರಣೆ ನಡೆದಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

Advertisement

ಈ ನಡುವೆ, ಗುರುವಾರ ಸಾವಿರಾರು ಸಾರ್ವ­ಜನಿಕರು, ಕುಟುಂಬಸ್ಥರ ಅಶ್ರುತರ್ಪಣದೊಂದಿಗೆ ನಾಲ್ವರು ಹುತಾತ್ಮ ಯೋಧರ ಅಂತ್ಯಸಂಸ್ಕಾರ ನೆರವೇರಿದೆ. ಜತೆಗೆ, ಜಮ್ಮು ಮತ್ತು ಕಾಶ್ಮೀರದ ಹಲವೆಡೆ ಪಾಕಿಸ್ತಾನದ ವಿರುದ್ಧ ವ್ಯಾಪಕ ಪ್ರತಿಭಟನೆಗಳೂ ನಡೆದಿವೆ. ಪಾಕಿಸ್ತಾನದ ವಿರುದ್ಧ ಘೋಷಣೆ ಕೂಗಿ, ಆ ದೇಶದ ಧ್ವಜವನ್ನು ಸುಟ್ಟು ಹಾಕಿ ಆಕ್ರೋಶ ವ್ಯಕ್ತಪಡಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next