Advertisement

ಸಹೋದ್ಯೋಗಿಯನ್ನೇ ಕೊಂದ ಸೆಕ್ಯೂರಿಟಿ ಗಾರ್ಡ್‌

11:58 AM Oct 17, 2017 | Team Udayavani |

ಬೆಂಗಳೂರು: ಮದ್ಯದ ಅಮಲಿನಲ್ಲಿದ್ದ ಸೆಕ್ಯೂರಿಟಿ ಗಾರ್ಡ್‌ ತನ್ನ ಸಹೋದ್ಯೋಗಿಯನ್ನೇ ಕೊಂದ ಘಟನೆ ಎಂ.ಎಸ್‌.ರಾಮಯ್ಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ ಹಾಸ್ಟೆಲ್‌ ಬಳಿ ನಡೆದಿದೆ. ಅಸ್ಸಾಂ ಮೂಲದ ಬಿನೋದ್‌ ಬಸು (30) ಕೊಲೆಯಾದ ದುರ್ದೈವಿ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಸದಾಶಿವ ನಗರ ಠಾಣೆ ಪೊಲೀಸರು ಕೊಲೆ ಆರೋಪಿ, ದೆಹಲಿ ಮೂಲದ ತುಷಾರ್‌ನನ್ನು ಬಂಧಿಸಿ, ತನಿಖೆ ಮುಂದುವರಿಸಿದ್ದಾರೆ.

Advertisement

ಆರು ತಿಂಗಳಿನಿಂದ ಎಂ.ಎಸ್‌.ರಾಮಯ್ಯ ವೈದ್ಯಕೀಯ ವಿದ್ಯಾರ್ಥಿಗಳ ಹಾಸ್ಟೆಲ್‌ನ ಸೆಕ್ಯೂರಿಟಿ ಗಾರ್ಡ್‌ಗಳಾಗಿ ಕೆಲಸ ಮಾಡುತ್ತಿದ್ದ ತುಷಾರ್‌ ಹಾಗೂ ಬಿನೋದ್‌, ಅಲ್ಲಿಯೇ ಕೊಠಡಿಯೊಂದರಲ್ಲಿ ವಾಸವಿದ್ದರು. ಪರಸ್ಪರ ಸ್ನೇಹಿತರಾಗಿದ್ದ ಇಬ್ಬರೂ ಭಾನುವಾರ ರಾತ್ರಿ ಮದ್ಯಪಾನ ಮಾಡಿ ರಾತ್ರಿ 11:45ರ ಸುಮಾರಿಗೆ ವಾಪಸ್‌ ಬಂದಿದ್ದರು.

ಕೊಠಡಿಯಲ್ಲಿ ಕೆಲ ಸಮಯದ ಬಳಿಕ ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ ನಡೆದಿದ್ದು, ಪರಸ್ಪರ ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಈ ವೇಳೆ ಜಗಳ ವಿಕೋಪಕ್ಕೆ ತಿರುಗಿ ಆರೋಪಿ ತುಷಾರ್‌, ಬಿನೋದ್‌ ಮುಖ ಹಾಗೂ ಎದೆ ಭಾಗಕ್ಕೆ ಬಲವಾಗಿ ಹೊಡೆದಿದ್ದಾನೆ. ಪರಿಣಾಮ ತೀವ್ರ ಅಸ್ವಸ್ಥಗೊಂಡ ಬಿನೋದ್‌ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿನೋದ್‌ ಮೃತಪಟ್ಟಿರುವುದು ತಿಳಿದ ಕೂಡಲೇ ತುಷಾರ್‌ ಪರಾರಿಯಾಗಿದ್ದಾನೆ. ಕೆಲ ಹೊತ್ತಿನ ಬಳಿಕ ಅದೇ ಕೊಠಡಿಯಲ್ಲಿ ಉಳಿದುಕೊಂಡಿದ್ದ ಮತ್ತೂಬ್ಬ ಸೆಕ್ಯೂರಿಟಿ ಗಾರ್ಡ್‌ ಬಂದಾಗ, ಬಿನೋದ್‌ ಮೃತಪಟ್ಟಿರುವುದನ್ನು ಗಮನಿಸಿ ಕೂಡಲೇ ಹಾಸ್ಟೆಲ್‌ ಮೇಲ್ವಿಚಾರಕರಿಗೆ ಮಾಹಿತಿ ನೀಡಿದ್ದು, ಅವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next