Advertisement

ವಿದ್ಯಾರ್ಥಿನಿಯರ ಸುರಕ್ಷೆ: ಇಂದು ಸಚಿವ ಯು.ಟಿ. ಖಾದರ್‌ ಸಭೆ

02:31 AM Jul 08, 2019 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಶಾಲಾ / ಕಾಲೇಜು ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ ಪ್ರಕರಣಗಳು ಅಲ್ಲಲ್ಲಿ ವರದಿಯಾಗುತ್ತಿದ್ದು, ಅವರ ಸುರಕ್ಷಾ ಕ್ರಮಗಳ ಬಗ್ಗೆ ಚರ್ಚಿಸಲು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ಅಧ್ಯಕ್ಷತೆಯಲ್ಲಿ ಜು. 8ರಂದು ಬೆಳಗ್ಗೆ 10 ಗಂಟೆಗೆ ಜಿ.ಪಂ. ನೇತ್ರಾವತಿ ಸಭಾಂಗಣದಲ್ಲಿ ಸಭೆ ಆಯೋಜಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Advertisement

ಕಾಲೇಜು ವಿದ್ಯಾರ್ಥಿಗಳಲ್ಲಿ ಮಹಿಳೆಯರ ಬಗ್ಗೆ ಗೌರವ ಮತ್ತು ಉತ್ತಮ ಪ್ರಜ್ಞೆ ಬೆಳೆಸುವ ವಿಚಾರದಲ್ಲಿ ಶಾಲಾ ಮುಖ್ಯಸ್ಥರು ತೆಗೆದುಕೊಳ್ಳಬೇಕಾದ ಕ್ರಮಗಳು ಹಾಗೂ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ / ಹಾಸ್ಟೆಲ್ಗಳಲ್ಲಿ ಇರುವ ಹೆಣ್ಣು ಮಕ್ಕಳ ಸುರಕ್ಷೆ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದು ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next