Advertisement

ಬೆಂಗಳೂರಿನಲ್ಲಿ ಭದ್ರತೆ ಹೆಚ್ಚಿಸಲು ಪೊಲೀಸ್ ಸುತ್ತೋಲೆ; ಗೃಹ ಸಚಿವರ ದೌಡು

02:23 PM Oct 29, 2021 | Team Udayavani |

ಬೆಂಗಳೂರು : ಪ್ರಖ್ಯಾತ ನಟ ಪುನೀತ್ ರಾಜಕುಮಾರ್ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿರುವ ಹಿನ್ನಲೆಯಲ್ಲಿ ಬೆಂಗಳೂರು ನಗರದಲ್ಲಿ ಭದ್ರತೆ ಬಿಗಿ ಗೊಳಿಸಲು ಶುಕ್ರವಾರ ಪೊಲೀಸ್ ಸುತ್ತೋಲೆ ಹೊರಡಿಸಲಾಗಿದೆ.

Advertisement

ಈಗಾಗಲೇ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸಾಗರದ ಕಾರ್ಯಕ್ರಮ ಮೊಟಕು ಗೊಳಿಸಿ ಬೆಂಗಳೂರಿನತ್ತ ಧಾವಿಸುತ್ತಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.

ಇದನ್ನೂ ಓದಿನಟ ಪುನೀತ್ ರಾಜಕುಮಾರ್ ಗೆ ಹೃದಯಾಘಾತ: ಆಸ್ಪತ್ರೆಗೆ ಸಿಎಂ ಭೇಟಿ, ವೈದ್ಯರು ಹೇಳಿದ್ದೇನು?

ಪುನೀತ್ ರಾಜಕುಮಾರ್ ಅವರು ದಾಖಲಾಗಿರುವ ವಿಕ್ರಂ ಆಸ್ಪತ್ರೆಯ ಸುತ್ತಲೂ ಭದ್ರತೆ ಬಿಗಿ ಗೊಳಿಸಲಾಗಿದ್ದು, ಗಣ್ಯಾತೀಗಣ್ಯರು, ಸಾವಿರಾರು ಅಭಿಮಾನಿಗಳು ಆಗಮಿಸುತ್ತಿರುವ ಹಿನ್ನಲೆಯಲ್ಲಿ ಹೆಚ್ಚುವರಿ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.

ಎಲ್ಲೆಡೆ ಅಭಿಮಾನಿಗಳು ನೆಚ್ಚಿನ ನಟನಿಗಾಗಿ ಪ್ರಾರ್ಥಿಸುತ್ತಿದ್ದರೆ, ಅನೇಕರು ಕೇಳುತ್ತಿರುವ ಸುದ್ದಿ ಸುಳ್ಳಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next