Advertisement

ಸಂಭ್ರಮಾಚರಣೆ: ದೇಶದ್ರೋಹ ಕೇಸು

11:56 PM Oct 28, 2021 | Team Udayavani |

ಲಕ್ನೋ/ಆಗ್ರಾ: ಟಿ-20 ಕ್ರಿಕೆಟ್‌ ಪಂದ್ಯದಲ್ಲಿ ಪಾಕಿಸ್ಥಾನ ವಿರುದ್ಧ ಭಾರತ ಸೋತಿರುವುದನ್ನು ಸಂಭ್ರಮಿಸುವವರ ವಿರುದ್ಧ ದೇಶದ್ರೋಹ ಕಾಯ್ದೆಯಡಿ ಕೇಸು ದಾಖಲಿಸಲಾಗುತ್ತದೆ. ಹೀಗೆಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಎಚ್ಚರಿಕೆ ನೀಡಿದ್ದಾರೆ.

Advertisement

ಗುರುವಾರ ಮುಖ್ಯಮಂತ್ರಿಗಳ ಕಚೇರಿ ಟ್ವಿಟರ್‌ ಹ್ಯಾಂಡಲ್‌ ಮೂಲಕ ಎಚ್ಚರಿಕೆ ನೀಡಲಾಗಿದೆ. ಉತ್ತರ ಪ್ರದೇಶದಲ್ಲಿ ಸಂಭ್ರಮಾಚರಣೆ ಆರೋಪಕ್ಕೆ ಸಂಬಂಧಿಸಿದಂತೆ ಇದುವರೆಗೆ ಐವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಈ ಪೈಕಿ ಬದೌನ್‌ ಜಿಲ್ಲೆಯಲ್ಲಿ ಫೇಸ್‌ಬುಕ್‌ ಮೂಲಕ ಸಂಭ್ರಮ ವ್ಯಕ್ತಪಡಿಸಿದ್ದಕ್ಕಾಗಿ ಒಬ್ಬನನ್ನು ಬಂಧಿಸ ಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಈ ನಡುವೆ ಬುಧವಾರ ಆಗ್ರಾದಲ್ಲಿ  ಜಯಗಳಿಸಿದ್ದರ ಬಗ್ಗೆ ಸಂಭ್ರಮಾಚರಣೆ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಆಗ್ರಾದಲ್ಲಿ ಜಮ್ಮು ಮತ್ತು ಕಾಶ್ಮೀರದ ಮೂವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next