Advertisement

Sedam; ಸರಿಯಾಗಿ ಓದು ಎಂದಿದ್ದಕ್ಕೆ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

04:24 PM Aug 25, 2023 | Team Udayavani |

ಕಲಬುರಗಿ: ವಿದ್ಯಾಭ್ಯಾಸ ಚೆನ್ನಾಗಿ ಮಾಡು, ಸರಿಯಾಗಿ ಓದು ಎಂದು ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಪಿಯು ವಿದ್ಯಾರ್ಥಿನಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಸೇಡಂ ತಾಲೂಕಿನಲ್ಲಿ ನಡೆದಿದೆ.

Advertisement

ಜಿಲ್ಲೆಯ ಸೇಡಂ ತಾಲೂಕಿನ ಕೋಡ್ಲಾ ಗ್ರಾಮದ ಕಾವೇರಿ (17 ವ) ಎಂಬ ವಿದ್ಯಾರ್ಥಿನಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ದಿನಾಲೂ ಕಾಲೇಜಿಗೆ ಹೋಗು, ಚೆನ್ನಾಗಿ ಓದಿಕೊ ಎಂದು ಹಿರಿಯರು ಬುದ್ದಿವಾದ ಹೇಳಿದ್ದಾರೆ. ‌ಆದರೆ ಇದರಿಂದ‌ ನೊಂದ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ ಎಂದು ವರದಿಯಾಗಿದೆ.‌

ವಿದ್ಯಾರ್ಥಿನಿ ಕಾವೇರಿ ಸೇಡಂ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಿಯು ಪ್ರಥಮ ವರ್ಷದಲ್ಲಿ ಓದುತ್ತಿದ್ದಳು. ನಿನ್ನೆ ತಡರಾತ್ರಿ ಮನೆಯಿಂದ ಹೊರಗೆ ಹೋಗಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖಾ ಕಾರ್ಯ ಮುಂದುವರೆದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next