Advertisement

ನನ್ನನ್ನು ಒಬ್ಬ ನಟಿಯಾಗಿ ಮಾತ್ರ ನೋಡಿ: ಪವಿತ್ರಾ ಲೋಕೇಶ್‌ ನೇರ ಮಾತು

04:08 PM May 20, 2023 | Team Udayavani |

“ಮತ್ತೆ ಮದುವೆ’ ಹೀಗೊಂದು ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಪವಿತ್ರಾ ಲೋಕೇಶ್‌ ಹಾಗೂ ನರೇಶ್‌ ಮುಖ್ಯಭೂಮಿಕೆಯಲ್ಲಿದ್ದಾರೆ. ಸಿನಿಮಾದ ಟ್ರೇಲರ್‌ ನೋಡಿದವರಿಗೆ ಇದು ಅವರ ಮದುವೆ ಸಂದರ್ಭದಲ್ಲಿ ನಡೆದ ರಿಯಲ್‌ ಘಟನೆಗಳನ್ನಿಟ್ಟುಕೊಂಡು ಮಾಡಿದ ಸಿನಿಮಾದಂತೆ ಕಾಣುತ್ತದೆ.

Advertisement

ಈ ಕುರಿತಾದ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಪವಿತ್ರಾ ಲೊಕೇಶ್‌ “ಒಂದೆರಡು ನಿಮಿಷದ ಟೀಸರ್‌, ಟ್ರೇಲರ್‌ ನೋಡಿ ಯಾವ ನಿರ್ಧಾರಕ್ಕೂ ಬರಬೇಡಿ, ಸಿನಿಮಾ ನೋಡಿದರೆ ನಾವು ಏನು ಹೇಳಲು ಹೊರಟಿದ್ದೇವೆ ಎನ್ನುವುದು ಅರ್ಥವಾಗುತ್ತದೆ. ಸಮಾಜಕ್ಕೆ ಒಂದೊಳ್ಳೆ ಸಂದೇಶ ನೀಡಲು ಹೊರಟಿದ್ದೇವೆ. ಈಗಲೇ ಸಿನಿಮಾ ಕಥೆಯನ್ನು ಹೇಳಲು ಸಾಧ್ಯವಿಲ್ಲ. ನಮ್ಮ ಜೀವನಕ್ಕೂ ಸಿನಿಮಾಗೂ ಏನೂ ಸಂಬಂಧ ಇಲ್ಲ. ಸಿನಿಮಾ ಬೇರೆ, ವೈಯಕ್ತಿಕ ಜೀವನವೇ ಬೇರೆ. ನನ್ನ ವೃತ್ತಿಗೂ ವೈಯಕ್ತಿಕ ವಿಚಾರಕ್ಕೂ ಲಿಂಕ್‌ ಮಾಡುವುದು ನನಗೆ ಇಷ್ಟವಿಲ್ಲ. ನನ್ನನ್ನು ಒಬ್ಬ ನಟಿಯಾಗಿ ಮಾತ್ರ ನೋಡಿ. ಬೇಕಂತಲೇ ಯಾರೂ ಸುದ್ದಿಯಾಗುವುದಿಲ್ಲ. 1994ನಲ್ಲಿ ಅಂಬರೀಶ್‌ ಅವರು ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದರು. ಅಲ್ಲಿಂದ ಇದುವರೆಗೂ ನಾನು ಯಾವುದೇ ವಿಚಾರವನ್ನು ಮಾಧ್ಯಮಗಳ ಮುಂದೆ ಬಂದು ಹೇಳಿಕೊಂಡಿರಲಿಲ್ಲ. ದುರುದ್ದೇಶಪೂರ್ವಕವಾಗಿ ನನ್ನ ಹೆಗಲ ಮೇಲೆ ಗನ್‌ ಇಟ್ಟು ನರೇಶ್‌ ಅವರನ್ನು ಶೂಟ್‌ ಮಾಡುವ ಪಿತೂರಿ ನಡೆದಿತ್ತು’ ಎನ್ನುವುದು ಪವಿತ್ರಾ ಲೋಕೇಶ್‌ ಮಾತು.

ನರೇಶ್‌ ಮಾತನಾಡಿ, “ಹಿಂದೆ ದೇವಾನುದೇವತೆಗಳೇ ಬಹುಪತ್ನಿತ್ವದಲ್ಲಿದ್ದರು. ರಾಜರೂ ಒಂದಕ್ಕಿಂತ ಹೆಚ್ಚು ಮದುವೆ ಆಗುತ್ತಿದ್ದರು. ಅದೆಲ್ಲವನ್ನೂ ನಾವು ಸ್ವೀಕರಿಸಿ, ಒಪ್ಪಿಕೊಂಡಿದ್ದೇವೆ. ಈಗಲೂ ಸುಪ್ರೀಂಕೋರ್ಟ್‌ ಲಿವ್‌ ಇನ್‌ ರಿಲೇಶನ್‌ಶಿಪ್‌ ತಪ್ಪಲ್ಲ ಎಂದು ತೀರ್ಪು ನೀಡಿದೆ. ಅಂತದ್ದರಲ್ಲಿ ನಮ್ಮಿಬ್ಬರ ತಪ್ಪು ಏನಿದೆ? ನಾನಂತೂ ಸಿಂಗಲ್‌ ಅಲ್ಲ, ಪವಿತ್ರಾ ಹಾಗೂ ನಾವಿಬ್ಬರೂ ಲಿವ್‌ ಇನ್‌ ರಿಲೇಶನ್‌ಶಿಪ್‌ನಲ್ಲಿದ್ದೇವೆ ಎಂದು ಬಹಿರಂಗವಾಗಿ ಒಪ್ಪಿಕೊಂಡರು.

Advertisement

Udayavani is now on Telegram. Click here to join our channel and stay updated with the latest news.

Next