Advertisement

ಗಿಡಮರ ಉಳಿಸಿ ಬೆಳೆಸಲು ಸೀಡ್‌ಬಾಲ್‌ ಸಹಕಾರಿ

01:12 PM May 29, 2017 | Team Udayavani |

ಹುಣಸೂರು: ರಾಜ್ಯ ಸರ್ಕಾರದ ಮಹತ್ವಾಂಕಾಂಕ್ಷೆಯ ಯೋಜನೆಗಳಲ್ಲೊಂದಾದ ಸೀಡ್‌ಬಾಲ್‌ ನಿಂದ ಸಸಿ ತಯಾರಿಕೆಗೆ ಪಟ್ಟಣದಲ್ಲಿ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ಎರಡನೇ ಬಾರಿಗೆ ಅರಣ್ಯ ಇಲಾಖೆಯ ಕೇಂದ್ರೀಯ ಸಸ್ಯ ಕ್ಷೇತ್ರದಲ್ಲಿ ಹಸಿರು ಕ್ರಾಂತಿಯ ಸೀಡ್‌ ಬಾಲ್‌(ಮಣ್ಣುನುಂಡೆ) ತಯಾರಿಸುವ ಕಾರ್ಯಾಗಾರ ನಡೆಯಿತು.

Advertisement

ನಗರದ ಪ್ರಾದೇಶಿಕ ಅರಣ್ಯ ವಿಭಾಗದ ಉಪಅರಣ್ಯ ಸಂರಕ್ಷಣಾಕಾರಿಗಳ ಕಚೇರಿ ಆವರಣದಲ್ಲಿ ಬನ್ನಿಕುಪ್ಪೆ ಜಿಪಂ ವ್ಯಾಪ್ತಿಯ ಗ್ರಾಪಂಗಳು, ಸ್ನೇಹ ಜೀವಿಸಂಸ್ಥೆ, ಗೋಗ್ರೀನ್‌ಕ್ಲಬ್‌, ಅರಣ್ಯಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಸೀಡ್‌ಬಾಲ್‌ ಹಸಿರು ಕ್ರಾಂತಿಯಲ್ಲಿ ನೆರೆದಿದ್ದ ಮಹಿಳೆಯರು ಸೇರಿದಂತೆ ನೂರಕ್ಕೂ ಹೆಚ್ಚು ಮಂದಿ ಸುಮಾರು 7 ಸಾವಿರಕ್ಕೂ ಹೆಚ್ಚು ಸೀಡ್‌ಬಾಲ್‌ ತಯಾರಿಸಿದರು.

ಜಿಪಂ ಸದಸ್ಯೆ ಡಾ.ಪುಷ್ಪ ಅಮರ್‌ನಾಥ್‌ ಮಾತನಾಡಿ, ಕಳೆದ ಭೂಮಿ ದಿನಾಚರಣೆಯ ಅಂಗವಾಗಿ ಲಕ್ಷಕ್ಕೂ ಹೆಚ್ಚು ಮಣ್ಣಿನುಂಡೆಗಳನ್ನು ತಯಾರಿಸಿ ತಾಲೂಕಿನ ವಿವಿಧ ಕೆರೆ ಅಂಗಳದಲ್ಲಿ ಹಾಕಲಾಗಿದೆ. ಈ ವರ್ಷ ಉತ್ತಮ ಮಳೆಯಾಗಿದ್ದು, ಕೆಲವು ಮೊಳಕೆಯೊಡೆದಿರುವುದನ್ನು ಮನಗಂಡು ಇದೀಗ ಮತ್ತೆ ಸೀಡ್‌ಬಾಲ್‌ ತಯಾರಿಸಿ ಅವಶ್ಯವಿರುವೆಡೆ ಹಾಕಲಾಗುವುದು.

ಇದರಿಂದ ಕಡಿಮೆ ಖರ್ಚಿನಲ್ಲಿ ಗಿಡಮರ ಉಳಿಸಿ ಪರಿಸರಕ್ಕೆ ಕೊಡಬಹುದಾದ ದೊಡ್ಡ ಕಾಣಿಕೆ ಎಂದರು. ತಾಪಂ ಕಾರ್ಯನಿರ್ವಹಣಾಧಿಕಾರಿ ಕೃಷ್ಣಕುಮಾರ್‌ ಮಾತನಾಡಿ, ಕಡಿಮೆ ಖರ್ಚಿನಲ್ಲಿ ನಮ್ಮ ಪ್ರಾಚೀನರು ಬಳಸುತ್ತಿದ್ದ ಮಣ್ಣಿನುಂಡೆ ಮೂಲಕ ಸಸಿ ಬೆಳೆಸುವ ಪ್ರವೃತ್ತಿ ಇಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯಕ್ರಮ ಇದಾಗಿದ್ದು, ಪಿಡಿಒಗಳು ತಮ್ಮ ಗ್ರಾಪಂ ವ್ಯಾಪ್ತಿಯಲ್ಲಿ ಎನ್‌ಆರ್‌ಇಜಿ ಯೋಜನೆಯಡಿಯಲ್ಲಿ  ಈ ಯೋಜನೆ ಸಾಕಾರಗೊಳಿಸಿ,

ರೈತರು, ವಿದ್ಯಾರ್ಥಿಗಳು, ಮಹಿಳಾ ಸ್ವಸಹಾಯ ಸಂಘಗಳು ಹಾಗೂ ನಾಗರಿಕರು ಇಂತಹ ಪರಿಸರ ಪೂರಕ ಕಾ  ರ್ಯಕ್ರಮಗಳಿಗೆ ಸಹಕಾರ ನೀಡಬೇಕು ಎಂದು ತಿಳಿಸಿದರು. ಇಂದಿನ ಸೀಡ್‌ಬಾಲ್‌ನಲ್ಲಿ ಜೆವಿಕ ಇಂಧನಕ್ಕೆ ಪೂರಕವಾದ ಹೊಂಗೆ ಸೇರಿದಂತೆ ಹುಣಸೇ, ನೆಲ್ಲಿ, ಬಸರಿ, ನೇರಳೆ ಹೀಗೆ ಅನೇಕ ಬೀಜಗಳನ್ನು ಮಣ್ಣಿನುಂಡೆಯಲ್ಲಿ ಹಾಕಿದರು.

Advertisement

ಮಣ್ಣಿನುಂಡೆ: ರೈತರು ಮಳೆಗಾಲಕ್ಕೂ ಮುನ್ನ ಸಸಿ ತಯಾರಿಸುವ ಸಲುವಾಗಿ ಕೆಮ್ಮಣ್ಣನ್ನು ಸಗಣಿ, ಗೋ ಮೂತ್ರದೊಂದಿಗೆ ಮಿಶ್ರಮಾಡಿ  ಮೂರ್‍ನಾಲ್ಕು ದಿನಗಳ ಕಾಲ ಒಂದೆಡೆ ರಾಶಿಹಾಕಿದ ನಂತರ ಉಂಡೆ ಮಾಡಿಕೊಂಡು ಮಧ್ಯದಲ್ಲಿ ತಮ್ಮ ಜಮೀನಿಗೆ ಬೇಕಾದ ಸಸಿಗಳ ಬೀಜವನ್ನು ಉಂಡೆಯೊಳಗೆ ಹಾಕಿ ನಂತರ ಉಂಡೆಗಳನ್ನು ಒಂದೆಡೆ ಶೇಖರಿಸಿ, ಸಸಿ ಮೊಳಕೆಯೊಡೆದ ನಂತರ ಅಗತ್ಯವಿರುವ ಕಡೆಗಳಲ್ಲಿ ಹಾಕಿ ಪೋಷಿಸುವುದೇ ಸೀಡ್‌ಬಾಲ್‌.

ಅಧಿಕಾರಿಗಳು, ಸ್ವಯಂ ಸೇವಕರೂ ಭಾಗಿ: ಈ ಕಾರ್ಯಕ್ರಮದಲ್ಲಿ ಗೋಗ್ರೀನ್‌ ಸಂಸ್ಥೆ, ಸ್ನೇಹಜೀವಿ ಸಂಸ್ಥೆ, ಅರಣ್ಯ ಸಿಬ್ಬಂದಿ, ಮಹಿಳಾ ಸಂಘಗಳವರ ಜೊತೆಗೆ ಪಿಡಿಒಗಳಾದ ನರಹರಿ, ಶ್ರೀಶೈಲ, ಸೋಮಣ್ಣ, ಭವ್ಯ ಹಾಗೂ ಗ್ರಾಪಂ ಸಿಬ್ಬಂದಿ ಹಾಗೂ ಕೆಲ ಸ್ವಯಂಸೇವಕರು ಸಹ ಮಣ್ಣಿನುಂಡೆ ಮಾಡಿ ಬೀಜ ನೆಟ್ಟು, ಪರಿಸರ ಪ್ರೀತಿ ಮೆರೆದರು.

ಮೊಳಕೆ ಕಂಡು ಹರ್ಷ: ವಿಶ್ವ ಭೂಮಿ ದಿನಾಚರಣೆಯಂದು ವಿವಿಧ ತಳಿಗಳ ಬೀಜಹಾಕಿ, ತಯಾರಿಸಿದ್ದ ಮಣ್ಣಿನುಂಡೆಯನ್ನು ಪ್ರಾಯೋಗಿಕವಾಗಿ ಅರಣ್ಯ ಇಲಾಖೆ ಆವರಣದಲ್ಲಿ ಹಾಕಲಾಗಿತ್ತು. ಮಳೆ ಬೀಳುತ್ತಿದ್ದಂತೆ ಅಲ್ಲಲ್ಲಿ ನೂರಾರು ಸೀಡ್‌ ಬಾಲ್‌ ಗಳಿಂದ ಸಸಿಯ ಮೊಳಕೆಯಾಗಿದ್ದನ್ನು ಅರಣ್ಯ ಇಲಾಖೆಯ ಸಸಿ ಮಡಿ ನಿರ್ವಹಣೆಯ ನೌಕರ ರಮೇಶ ತೋರಿಸಿದ್ದನ್ನು ಕಣ್ತುಂಬಿಕೊಂಡ ಜಿಪಂ ಸದಸ್ಯೆ ಡಾ.ಪುಷ್ಪ, ಇಒ ಕಷ್ಣಕುಮಾರ್‌ ಸೇರಿದಂತೆ ಅನೇಕರು ಪುಳಕಿತಗೊಂಡು ಸೀಡ್‌ಬಾಲ್‌ ತಯಾರಿಕೆಯ ಸಾರ್ಥಕತೆಯಲ್ಲಿ ಮಿಂದೆದ್ದರು.

Advertisement

Udayavani is now on Telegram. Click here to join our channel and stay updated with the latest news.

Next