Advertisement

ಹೆಚ್ಚಿನ ದರಕ್ಕೆ ಬೀಜ ಮಾರಿದರೆ ಕ್ರಮ

03:40 PM May 22, 2022 | Team Udayavani |

ಸಿರುಗುಪ್ಪ: ಕಳೆದ ಎರಡು ದಿನಗಳ ಹಿಂದೆ ಉತ್ತಮ ಮಳೆಯಾಗಿದ್ದರಿಂದ ಮಳೆಯಾಶ್ರಿತ ಪ್ರದೇಶದ ರೈತರು ಸೂರ್ಯಕಾಂತಿ ಬೆಳೆಯನ್ನು ಬಿತ್ತನೆ ಮಾಡಲು ಮುಂದಾಗಿದ್ದು, ಬೀಜ ಖರೀದಿಗೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಬೀಜ ಮಾರಾಟದ ಅಂಗಡಿಗಳಿಗೆ ಲಗ್ಗೆ ಇಟ್ಟ ಪರಿಣಾಮವಾಗಿ ಬೀಜ ಮಾರಾಟಗಾರರು ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದ್ದಾರೆಂಬ ಆರೋಪವನ್ನು ರೈತರು ಮಾಡಿದ ಹಿನ್ನೆಲೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ನಗರದಲ್ಲಿರುವ ಬೀಜ ಮಾರಾಟಗಾರರ ಅಂಗಡಿಗಳಿಗೆ ತೆರಳಿ ಪರಿಶೀಲನೆ ನಡೆಸಿ ಮಾಹಿತಿ ಪಡೆದರು.

Advertisement

ಸಹಾಯಕ ಕೃಷಿ ನಿರ್ದೇಶಕ ಟಿ.ನಜೀರ್‌ ಅಹ್ಮದ್‌ ಮಾತನಾಡಿ, ಸರ್ಕಾರ ನಿಗದಿಪಡಿಸಿದ ಎಂಆರ್‌ಪಿ ದರಕ್ಕಿಂತ ಹೆಚ್ಚಿನ ದರದಲ್ಲಿ ರೈತರಿಗೆ ಮಾರಾಟ ಮಾಡುತ್ತಿದ್ದಿರಿ ಎನ್ನುವ ಆರೋಪ ಕೇಳಿಬಂದಿದೆ.

ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದ್ದು ಕಂಡುಬಂದಲ್ಲಿ ಅಂಥ ಅಂಗಡಿಗಳ ಮಾಲೀಕರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದರು. ಕೃಷಿ ಅಧಿಕಾರಿ ಗರ್ಜೆಪ್ಪ ಮತ್ತು ಸಿಬ್ಬಂದಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next