Advertisement

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

01:34 PM Mar 19, 2024 | Team Udayavani |

ಗಂಗಾವತಿ: ತಾಲೂಕಿನ ಆನೆಗೊಂದಿ ಕಡೆಬಾಗಿಲು ಶ್ರೀರಂಗದೇವರಾಯಲು ವೃತ್ತದ ಬಳಿ ಇರುವ ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣವನ್ನು ತಾಲೂಕ ಆಡಳಿತದ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

Advertisement

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ಪ್ರಮುಖ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ ಗಳನ್ನು ನಿರ್ಮಿಸಲಾಗಿದ್ದು ಕಡೆ ಬಾಗಿಲು-ಆನೆಗೊಂದಿ ಚೆಕ್ ಪೋಸ್ಟ್ ಬಳಿ ನಡವು ಗ್ರಾಮದಿಂದ ಹೊಸಪೇಟೆಗೆ ತೆರಳುತ್ತಿದ್ದ ಕಾರಿನಲ್ಲಿ ವ್ಯಕ್ತಿ ಒಬ್ಬ 32.95 ಲಕ್ಷ ರೂಪಾಯಿ ಗಳನ್ನು ದಾಖಲೆಯಲ್ಲಿ ಇಲ್ಲ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಅಧಿಕಾರಿಗಳು ಪರಿಶೀಲನೆ ಮಾಡಿದಾಗ ದಾಖಲೆ ಇಲ್ಲದ ಹಣ ಎಂದು ತಿಳಿದುಬಂದಿದೆ.

ಈ ಸಂದರ್ಭದಲ್ಲಿ ತಹಸಿಲ್ದಾರ್ ಯು .ನಾಗರಾಜ್ ಗ್ರಾಮೀಣ ಸಿಪಿಐ ಸೋಮಶೇಖರ್ ಜುಟ್ಟಲ್ ಸೇರಿದಂತೆ ಕಂದಾಯ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next