Advertisement

ರಾಜ್ಯ ಮಹಿಳಾ ಕ್ರಿಕೆಟ್ ತಂಡಕ್ಕೆ ವಿಜಯಪುರ ಬಾಲೆ ಆಯ್ಕೆ

09:05 PM Sep 24, 2022 | Team Udayavani |

ವಿಜಯಪುರ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ 15 ಆಟಗಾರರ ಪಟ್ಟಿ ಶನಿವಾರ ಪ್ರಕಟವಾಗಿದ್ದು, ವಿಜಯಪುರ ಮೂಲದ ಅನ್ನಪೂರ್ಣ ಭೋಸಲೆ ವಿಕೆಟ್ ಕೀಪರ್ ಹಾಗೂ ಬ್ಯಾಟ್ಸಮನ್ ಆಗಿ ಆಯ್ಕೆಯಾಗಿದ್ದಾರೆ.

Advertisement

ಬಿಎಲ್‍ಡಿಇ ಸಂಸ್ಥೆಯ ಶ್ರೀಮತಿ ಬಂಗಾರಮ್ಮ ಸಜ್ಜನ ಮಹಿಳಾ ಕಲಾ ವಾಣಿಜ್ಯ ಹಾಗೂ ವಿಜ್ಞಾನ ಕಾಲೇಜಿನಲ್ಲಿ ಬಿ.ಕಾಂ. ಮೊದಲ ವರ್ಷದಲ್ಲಿ ಓದುತ್ತಿರುವ ಅನ್ನಪೂರ್ಣ 19 ವರ್ಷದೊಳಗಿನ ಕರ್ನಾಟಕ ಮಹಿಳಾ ಟಿ 20 ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಹೈದರಾಬಾದಿನಲ್ಲಿ ಅಕ್ಟೋಬರ್ 1 ರಿಂದ 8 ವರೆಗೆ ಮಹಿಳೆಯರ ಟಿ 20 ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ.

2019 ರಲ್ಲಿ 16 ವರ್ಷದೊಳಗಿನ ಏಕದಿನ ತಂಡಕ್ಕೆ ಆಯ್ಜೆಯಾಗಿದ್ದ ಅನ್ನಪೂರ್ಣ, 2021 ರಲ್ಲಿ 19ವರ್ಷದೊಳಗಿನ ಏಕದಿನ ತಂಡಕ್ಕೂ ಆಯ್ಕೆಯಾಗಿದ್ದಳು. ಇದೀಗ 19 ವರ್ಷದೊಳಗಿನ ಮಹಿಳಾ ಟಿ 20 ತಂಡಕ್ಕೆ ಆಯ್ಕೆಯಾಗಿದ್ದಾರೆ.

ಬಿಎಲ್‍ಡಿಇ ಸಂಸ್ಥೆಯ ಎಸ್‍ಬಿಎಸ್ ಮಹಿಳಾ ಕಲಾ ವಾಣಿಜ್ಯ ವಿಜ್ಞಾನ ಕಾಲೇಜಿನಲ್ಲೇ ಅಧ್ಯಯನ ಮಾಡಿದ್ದ ರಾಜೇಶ್ವರಿ ಗಾಯಕವಾಡ ಕರ್ನಾಟಕದ ಮೂಲಕ ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಪ್ರತಿನಿಧಿಸುತ್ತಿರುವುದನ್ನು ಇಲ್ಲಿ ಸ್ಮರಿಸಬಹುದು.

ಅನ್ನಪೂರ್ಣಾ ಸಾಧನೆಗೆ ಬಿಎಲ್‍ಡಿಇ ಸಂಸ್ಥೆಯ ಅಧ್ಯಕ್ಷರಾದ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಾ.ಎಂ.ಬಿ. ಪಾಟೀಲ ಅಭಿನಂದಿಸಿದ್ದು, ವಿಜಯಪುರ ಜಿಲ್ಲೆಯ ಕೀರ್ತಿಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಹಾರಿಸುವ ಸಾಧನೆ ಮಾಡುವಂತೆ ಹಾರೈಸಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next