Advertisement

ಸೆಲ್ಫಿ ವಿಡಿಯೋ ಮಾಡಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

07:00 AM Dec 30, 2017 | Team Udayavani |

ವಾಡಿ: ಸೆಲ್ಫಿ ವಿಡಿಯೋ ಮಾಡಿ ರೈಲಿಗೆ ತಲೆಕೊಟ್ಟು ಜೈ ಕರವೇ ಮುಖಂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಸಂಜೆ ಕಲಬುರಗಿ ನಗರದ ಕೋರಂಟಿ ಹನುಮಾನ ದೇವಸ್ಥಾನ ಸಮೀಪ ಸಂಭವಿಸಿದೆ. 

Advertisement

ಜೇವರ್ಗಿ ತಾಲೂಕಿನ ಸುಂಬಡ ಗ್ರಾಮದ ನಿವಾಸಿ ಸುಧಾಕರ ಎಸ್‌.ಉಪ್ಪಾರ (25) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ಜೈ ಕರ್ನಾಟಕ ರಕ್ಷಣಾ ವೇದಿಕೆಯ ಯಡ್ರಾಮಿ ಘಟಕದ ಅಧ್ಯಕ್ಷ ಎನ್ನಲಾಗಿದೆ. “ನನ್ನ ಸಾವಿಗೆ ಕೌಟುಂಬಿಕ ಸಮಸ್ಯೆಯೇ ಕಾರಣವಾಗಿದ್ದು, ನ್ಯಾಯ ಒದಗಿಸಿಕೊಡಬೇಕು’ ಎಂದು ಸಾವಿಗೂ ಮುಂಚೆ ಮೊಬೈಲ್‌ನಲ್ಲಿ ಚಿತ್ರಿಸಿಕೊಂಡ ವಿಡಿಯೋದಿಂದ ತಿಳಿದು ಬಂದಿದೆ ಎಂದು ವಾಡಿ ರೈಲ್ವೆ ಪೊಲೀಸ್‌ ಠಾಣೆಯ ಪಿಎಸ್‌ಐ ವೀರಭದ್ರಪ್ಪ ಎಸ್‌.ಎಚ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next