Advertisement

ಜಿಂಕೆ ಕೊಂಬು ಮಾರಾಟ: ಇಬ್ಬರ ಬಂಧನ

11:48 AM Nov 19, 2021 | Team Udayavani |

 ಬೆಂಗಳೂರು: ಜಿಂಕೆ ಕೊಂಬುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಸಿ.ಕೆ. ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ಕೊಳ್ಳೆಗಾಲದ ಸಿಂಗನಲ್ಲೂರಿನ ಮಾದಯ್ಯ (35), ಕನಕಪುರದ ತಿಮ್ಮಸಂದ್ರದ ರಮೇಶ್‌ (38) ಬಂಧಿತರು. ಆರೋಪಿಗಳಿಂದ 9 ಜತೆ ಜಿಂಕೆ ಕೊಂಬುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

ಆರೋಪಿಗಳು ಬನಶಂಕರಿ 3ನೇ ಹಂತದ ಶ್ರೀಕಂಠೇಶ್ವರ ದೇವಸ್ಥಾನದ ಹಿಂಭಾಗದ ರಸ್ತೆ ಸಿ.ಕೆ.ಅಚ್ಚುಕಟ್ಟು ಬಸ್‌ ನಿಲ್ದಾಣದ ಹಿಂಭಾಗ ಜಿಂಕೆ ಕೊಂಬುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದರು.

ಇದನ್ನೂ ಓದಿ:- ಮಂಗಳೂರು ವಿಮಾನ ನಿಲ್ದಾಣದಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನ ವಶ

ಈ ವೇಳೆ ಸ್ಥಳೀಯರೊಬ್ಬರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಖಚಿತ ಮಾಹಿತಿ ಆಧಾರಿಸಿ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿ, ಚೀಲದಲ್ಲಿದ್ದ 9 ಜತೆ (18) ಜಿಂಕೆ ಕೊಂಬುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next