Advertisement

ಕಾಳಸಂತೆಯಲ್ಲಿ ಪಡಿತರ ಮಾರಾಟ: ಖರೀದಿದಾರರ ವಿರುದ್ಧ ಕಠಿಣ ಕ್ರಮ

04:42 AM May 13, 2020 | Suhan S |

ಬಾಗಲಕೋಟೆ: ಕೋವಿಡ್‌-19 ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಸಮಯದಲ್ಲಿ ಸಾರ್ವಜನಿಕರಿಗೆ ಪಡಿತರ ಚೀಟಿದಾರರಿಗೆ ವಿತರಿಸಿದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದ ಹಾಗೂ ಖರೀದಿಸಿದವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-1955 ರಡಿ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ|ಕೆ.ರಾಜೇಂದ್ರ ತಿಳಿಸಿದ್ದಾರೆ.

Advertisement

ಏಪ್ರಿಲ್‌ನಲ್ಲಿ ಬಿಪಿಎಲ್‌ ಪಡಿತರ ಚೀಟಿದಾರರಿಗೆ ಪ್ರತಿ ಯುನಿಟ್‌ ಗೆ 10 ಕೆಜಿ ಅಕ್ಕಿ, ಪ್ರತಿ ಪಡಿತರ ಚೀಟಿಗೆ 4 ಕೆಜಿ ಗೋಧಿ, ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗೆ 70 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗಿದೆ. ಮೇನಲ್ಲಿ ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ ಅನ್ನಯೋಜನೆಯಡಿ ಬಿಪಿಎಲ್‌ ಮತ್ತು ಅಂತ್ಯೋದಯ ಪಡಿತರ ಚೀಟಿಯ ಪ್ರತಿ ಯುನಿಟ್‌ಗೆ 10 ಕೆಜಿ ಅಕ್ಕಿ ಮತ್ತು ಪ್ರತಿ ಪಡಿತರ ಚೀಟಿಗೆ 1 ಕೆ.ಜಿ ತೊಗರಿ ಬೇಳೆ ಉಚಿತವಾಗಿ ವಿತರಿಸಲಾಗಿರುತ್ತದೆ. ಆಹಾರಧಾನ್ಯ ಮಾರಾಟ ಮಾಡುವ ಪಡಿತರ ಚೀಟಿದಾರರು, ಖರೀದಿದಾರರು ಹಾಗೂ ಸಂಗ್ರಹಣಾ ಮಾಡುವವರ ಬಗ್ಗೆ ದೂ. ಸಂ. 08354-235094ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next