Advertisement

ಲವ್‌ ಜಿಹಾದ್‌ ಹೆಸರಿನಲ್ಲಿ ಯುವತಿಯರ ಮಾರಾಟ: ಶೋಭಾ ಕರಂದ್ಲಾಜೆ ಆರೋಪ

09:25 AM Feb 28, 2020 | Sriram |

ಬೆಂಗಳೂರು: “ಲವ್‌ ಜೆಹಾದ್‌’ ಹೆಸರಿನಲ್ಲಿ ವಿದೇಶಗಳಿಗೆ ಯುವತಿಯರ ಮಾರಾಟ ನಡೆಯುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದರು.

Advertisement

ನಗರದ ಖಾಸಗಿ ಹೊಟೇಲ್‌ನಲ್ಲಿ ಗುರುವಾರ ಕರ್ನಾಟಕ ಪತ್ರಕರ್ತೆಯರ ಸಂಘ ಆಯೋಜಿಸಿದ್ದ “ಮಕ್ಕಳನ್ನು ಲೈಂಗಿಕ ಶೋಷಣೆಯಿಂದ ರಕ್ಷಿಸುವ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಮಾಲೋಚನೆ’ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಹೆಣ್ಣು ಮಕ್ಕಳನ್ನು ಹೈದರಾಬಾದ್‌, ಮುಂಬಯಿಗೆ ಕರೆದುಕೊಂಡು ಹೋಗಿ ಬಲವಂತವಾಗಿ ವೇಶ್ಯಾವಾಟಿಕೆಗೆ ತಳ್ಳಲಾಗುತ್ತಿದೆ. ಮೈಸೂರು ಭಾಗದ ಗುಂಡ್ಲುಪೇಟೆ, ಎಚ್‌.ಡಿ.ಕೋಟೆ ಭಾಗದ ಮಕ್ಕಳು ನಾಪತ್ತೆ ಆಗುತ್ತಲೇ ಇದ್ದು ಇದರ ಹಿಂದಿರುವ ಶಕ್ತಿಗಳನ್ನು ಮಟ್ಟಹಾಕಬೇಕಾಗಿದೆ ಎಂದು ಹೇಳಿದರು.

ದೇವದಾಸಿ ಪದ್ಧತಿ ಬಗೆಗಿನ ಕಾನೂನು ಮತ್ತಷ್ಟು ಗಟ್ಟಿಯಾಗಬೇಕಾಗಿದೆ. ಅತ್ಯಾಚಾರ ಸಂಬಂಧಿಸಿದಂತೆ ನ್ಯಾಯಾಲಯದ ಮೊರೆ ಹೋದ ತತ್‌ಕ್ಷಣ ನ್ಯಾಯ ಸಿಗುತ್ತದೆ ಎಂಬ ನಂಬಿಕೆಯಿಲ್ಲ. ಆ ಹಿನ್ನೆಲೆಯಲ್ಲಿಯೇ ಹೈದರಾಬಾದ್‌ ಘಟನೆಯ ಅತ್ಯಾಚಾರಿಗಳನ್ನು ಎನ್‌ಕೌಂಟರ್‌ ಆದಾಗ ಹೆಣ್ಣು ಮಕ್ಕಳು ಸಂಭ್ರಮಿಸಿದ್ದರು ಎಂದು ತಿಳಿಸಿದರು.

ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ದಾಸ್‌ ಮಾತನಾಡಿ, ಸಮಾಜಕ್ಕೆ ಅಂಟಿಕೊಂಡಿರುವ ದೇವದಾಸಿ ಪದ್ಧತಿಯನ್ನು ಬೇರು ಸಹಿತ ನಿರ್ಮೂಲನೆ ಮಾಡದ ಹೊರತು, ಈ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಈ ನಿಟ್ಟಿನಲ್ಲಿ ಸರಕಾರ ದೇವದಾಸಿ ಪದ್ಧತಿ ನಿರ್ಮೂಲನ ಕಾನೂನನ್ನು ಗಟ್ಟಿಗೊಳಿಸಬೇಕಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next