Advertisement

ನಮ್ಮ ಶಿವಸೇನೆಯಲ್ಲಿ ಆಮೂಲಾಗ್ರ ಬದಲಾವಣೆಯಾಗಿದೆ: ಆದಿತ್ಯ ಠಾಕ್ರೆ

04:21 PM Jan 14, 2023 | Team Udayavani |

ಮುಂಬಯಿ : ಒಂದು ಕಾಲದಲ್ಲಿ ಆಕ್ರಮಣಕಾರಿ ಮಣ್ಣಿನ ಮಕ್ಕಳ ರಾಜಕೀಯಕ್ಕೆ ಹೆಸರುವಾಸಿಯಾಗಿದ್ದ ನಮ್ಮ ಪಕ್ಷದಲ್ಲಿ ಆಮೂಲಾಗ್ರ ಬದಲಾವಣೆ ಕಂಡುಬಂದಿದೆ ಎಂದು ಶಿವಸೇನಾ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಶನಿವಾರ ಹೇಳಿಕೆ ನೀಡಿದ್ದಾರೆ.

Advertisement

ಮಹಾರಾಷ್ಟ್ರದ ಮಾಜಿ ಸಚಿವ ತಮ್ಮ ತಂದೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ವರ್ಲಿಯಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ ಮಾತನಾಡಿ”ಮಣ್ಣಿನ ಮಕ್ಕಳ ಹಕ್ಕುಗಳಿಗಾಗಿ ಆಂದೋಲನಗಳನ್ನು ನಡೆಸುತ್ತಿದ್ದ ಶಿವಸೇನೆಯಲ್ಲಿ ಆಮೂಲಾಗ್ರ ಬದಲಾವಣೆಯಾಗಿದೆ … ಈಗ ನಾವು ಮಣ್ಣಿನ ಮಕ್ಕಳ, ವಿಶೇಷವಾಗಿ ಯುವಕರ ಸಮಸ್ಯೆಗಳನ್ನು ಪರಿಹರಿಸಲು ಉದ್ಯೋಗ ಮೇಳಗಳನ್ನು ಆಯೋಜಿಸುತ್ತೇವೆ ಎಂದರು.

ಯುವಕರು ಪಕ್ಷದ ಭಾಗವಾಗುತ್ತಿದ್ದಂತೆ ಹೊಸ ಮತ್ತು ಬಲವಾದ ಶಿವಸೇನೆ ತಯಾರಾಗುತ್ತಿದೆ. ಬಿಜೆಪಿ ಮತ್ತು ಏಕನಾಥ್ ಶಿಂಧೆ ನೇತೃತ್ವದ ಬಾಳಾಸಾಹೆಬಂಚಿ ಶಿವಸೇನೆಯ ಸಮ್ಮಿಶ್ರ ಸರ್ಕಾರವು ಜನರನ್ನು ವಿಭಜಿಸುವುದನ್ನು ಬಿಟ್ಟು ಮಹಾರಾಷ್ಟ್ರಕ್ಕೆ ಏನನ್ನೂ ಮಾಡಿಲ್ಲ ಎಂದು ಆದಿತ್ಯ ಠಾಕ್ರೆ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next