Advertisement

ಕಳಚಿದ ಕೊಂಡಿ : ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ ವಿಧಿವಶ

02:43 PM Dec 04, 2021 | Team Udayavani |

ಬೆಂಗಳೂರು : ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ಸಾಧಕರಲ್ಲೊಬ್ಬರಾದ ನಟ, ನಿರ್ಮಾಪಕ ಶಿವರಾಂ(84) ಅವರು ಶನಿವಾರ ಇಹಲೋಕ ತ್ಯಜಿಸಿದ್ದಾರೆ.

Advertisement

ಮನೆಯಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರು ವಿದ್ಯಾಪೀಠ ಬಳಿ ಇರುವ ಪ್ರಶಾಂತ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

ಶಿವರಾಂ ಅವರ ಮೆದುಳಿಗೆ ಗಂಭೀರ ಹಾನಿಯಾಗಿತ್ತು, ಜೀವರಕ್ಷಕ ಸಾಧನದ ನೆರವಿನಲ್ಲಿ ಅವರನ್ನು ಇಡಲಾಗಿತ್ತು. ಹೃದಯವೂ ಸ್ಪಂದಿಸುತ್ತಿರಲಿಲ್ಲ.

ಶಿವರಾಂ ಅವರ ಪುತ್ರ ಲಕ್ಷ್ಮೀಶ್ , ತಂದೆ ನಿಧನ ಹೊಂದಿರುವ ವಿಚಾರವನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ನಮ್ಮ ತಂದೆ ಭಗವಂತನ ಪಾದ ಸೇರಿದ್ದಾರೆ ಎಂದು ಭಾವುಕವಾಗಿ ನುಡಿದಿದ್ದಾರೆ.

Advertisement

ಶಿವರಾಂ ಅವರು ನಟ ಮಾತ್ರವಲ್ಲದೆ ನಿರ್ಮಾಪಕ ಮತ್ತು ನಿರ್ದೇಶಕರಾಗಿ ಕನ್ನಡ ಚಿತ್ರರಂಗದಲ್ಲಿ ಆರು ದಶಕಗಳ ಸೇವೆ ಸಲ್ಲಿಸಿದ್ದಾರೆ. ಅವರು ನಾಯಕನ ಪಾತ್ರಗಳು, ಹಾಸ್ಯ ಪಾತ್ರಗಳು ಮತ್ತು ಪೋಷಕ ಪಾತ್ರಗಳನ್ನು ನಿರ್ವಹಿಸಿದ್ದರು.

ತಮ್ಮ ಹಿರಿಯ ಸಹೋದರ, ಎಸ್. ರಾಮನಾಥನ್ ಅವರೊಂದಿಗೆ ಸೇರಿಕೊಂಡು 1972 ರಲ್ಲಿ ‘ಹೃದಯ ಸಂಗಮ’ವನ್ನು ನಿರ್ದೇಶಿಸುವುದರ ಜೊತೆಗೆ ರಾಶಿ ಬ್ರದರ್ಸ್ ಹೆಸರಿನಲ್ಲಿ ಹಲವಾರು ಚಲನಚಿತ್ರಗಳನ್ನು ನಿರ್ಮಿಸಿದ್ದರು.

ಸಹೋದರರು ಕನ್ನಡ ಮಾತ್ರವಲ್ಲದೆ ಬಾಲಿವುಡ್ ಚಲನಚಿತ್ರಗಳನ್ನೂ ನಿರ್ಮಿಸಿದ್ದರು.ನಟನಾಗಿ, ಶಿವರಾಮ್ ಅವರು ಅನೇಕ ಧೀಮಂತ ನಿರ್ದೇಶಕರೊಂದಿಗೆ ಕೆಲಸ ಮಾಡಿದ ಹೆಗ್ಗಳಿಕೆಯನ್ನು ಹೊಂದಿದ್ದು, ಪುಟ್ಟಣ್ಣ ಕಣಗಾಲ್ ಅವರೊಂದಿಗಿನ ಅವರ ಒಡನಾಟವು ಹೆಚ್ಚು ನೆನಪಿನಲ್ಲಿ ಉಳಿಯುತ್ತದೆ. ರಾಜಕುಮಾರ್ ಅಭಿನಯದ ಸಂಗೀತಂ ಶ್ರೀನಿವಾಸ ರಾವ್ ನಿರ್ದೇಶನದ ಎಲ್ಲಾ ಏಳು ಕನ್ನಡ ಚಲನಚಿತ್ರಗಳಲ್ಲಿ ಅವರು ಮುಖ್ಯ ಭಾಗವಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next