ಆಂಧ್ರಪ್ರದೇಶ: ಕಾಂಗ್ರೆಸ್ ನಾಯಕ ಧರ್ಮಪುರಿ ಶ್ರೀನಿವಾಸ್ ಅವರು ಹೃದಯಾಘಾತದಿಂದ ಶನಿವಾರ ಬೆಳಿಗ್ಗೆ ನಿಧನಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.
ಶ್ರೀನಿವಾಸ್ ಅವರು ಕೆಲ ದಿನಗಳಿಂದ ಅರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು ಇಂದು ಬೆಳಿಗ್ಗೆ ಸುಮಾರು ಮೂರೂ ಗಂಟೆಯ ಸುಮಾರಿಗೆ ಹೃದಯಾಘಾತವಾಗಿ ನಿಧನ ಹೊಂದಿರುವುದಾಗಿ ಕುಟುಂಬ ಮೂಲಗಳು ಮಾಹಿತಿ ನೀಡಿವೆ.
ಮಾಜಿ ಆಂಧ್ರ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿದ್ದ ಶ್ರೀನಿವಾಸ್ ಅವರು ಸಚಿವರಾಗಿ ಮತ್ತು ಸಂಸದರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅವರು ತಮ್ಮ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅವರ ಎರಡನೇ ಪುತ್ರ ಧರ್ಮಪುರಿ ಅರವಿಂದ್ ಪ್ರಸ್ತುತ ನಿಜಾಮಾಬಾದ್ ಸಂಸದರಾಗಿದ್ದಾರೆ. ಅವರ ಹಿರಿಯ ಮಗ ಸಂಜಯ್ ಈ ಹಿಂದೆ ನಿಜಾಮಾಬಾದ್ ಮೇಯರ್ ಆಗಿ ಸೇವೆ ಸಲ್ಲಿಸಿದ್ದರು.
ಶ್ರೀನಿವಾಸ್ ಅವರ ನಿಧನಕ್ಕೆ ತೆಲಂಗಾಣ ಸಾರಿಗೆ ಮತ್ತು ಕಲ್ಯಾಣ ಸಚಿವ ಪೊನ್ನಂ ಪ್ರಭಾಕರ್ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ: Defamation Case: ಮಮತಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ ಬೋಸ್