Advertisement

ಹಿರಿಯ ಕಾಂಗ್ರೆಸ್ ನಾಯಕ ರಾಜೀವ್ ತ್ಯಾಗಿ ನಿಧನ

12:05 AM Aug 13, 2020 | Hari Prasad |

ಹೊಸದಿಲ್ಲಿ: ಹಿರಿಯ ಕಾಂಗ್ರೆಸ್ ನಾಯಕ ರಾಜೀವ್ ತ್ಯಾಗಿ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

Advertisement

ರಾಜೀವ್ ತ್ಯಾಗಿ ಅವರು ಉತ್ತರಪ್ರದೇಶ ಕಾಂಗ್ರಸ್ ಘಟಕದ ಕಾರ್ಯದರ್ಶಿ ಹುದ್ದೆಯಲ್ಲಿದ್ದರು ಹಾಗೂ ವಕ್ತಾರರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.

ತ್ಯಾಗಿ ಅವರು ನಿಧನರಾಗುವುದಕ್ಕೆ ಕೆಲವೇ ತಾಸುಗಳ ಮೊದಲು ಟಿವಿ ಚರ್ಚೆಯೊಂದರಲ್ಲಿ ಭಾಗವಹಿಸಿದ್ದರು.

ಆ ಚರ್ಚೆಯಲ್ಲಿ ಭಾಗವಹಿಸಿದ್ದ ಬಿಜೆಪಿ ಪಕ್ಷದ ವಕ್ತಾರ ಸಂಬಿತ್ ಪಾತ್ರ ಅವರು ರಾಜಿವ್ ತ್ಯಾಗಿ ಅವರ ಅಚಾನಕ್ ಅಗಲುವಿಕೆಗೆ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

‘ನನ್ನ ಗೆಳೆಯರಾಗಿದ್ದ ಕಾಂಗ್ರೆಸ್ ವಕ್ತಾರ ರಾಜೀವ್ ತ್ಯಾಗಿ ಅವರು ಇದೀಗ ನಮ್ಮೊಂದಿಗಿಲ್ಲ ಎಂಬುದನ್ನು ನನ್ನಿಂದ ನಂಬಲಾಗುತ್ತಿಲ್ಲ. ಆಜ್ ತಕ್ ಚಾನೆಲ್ ನಲ್ಲಿ ಇಂದು ಸಾಯಂಕಾಲ 5 ಗಂಟೆಗೆ ನಾವು ಚರ್ಚೆಯಲ್ಲಿ ಭಾಗವಹಿಸಿದ್ದೆವು. ಜೀವನ ನಿಜವಾಗಿಯೂ ಕ್ಷಣಿಕವಾದದ್ದು’ ಎಂದು ಸಂಬಿತ್ ಪಾತ್ರ ಅವರು ತಮ್ಮ ಟ್ವೀಟ್ ನಲ್ಲಿ ಖೇದ ವ್ಯಕ್ತಪಡಿಸಿದ್ದಾರೆ.

Advertisement

ರಾಜೀವ್ ತ್ಯಾಗಿ ಅವರ ನಿಧನಕ್ಕೆ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ, ಎನ್.ಸಿ.ಪಿ. ನಾಯಕ ನವಾಬ್ ಮಲಿಕ್ ಸೇರಿದಂತೆ ಹಲವರು ಆಘಾತ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next