Advertisement

ಕೇರಳದ ಸಿಪಿಐ(ಎಂ) ನಾಯಕ, ಮಾಜಿ ಗೃಹ ಸಚಿವ ಕೊಡಿಯೇರಿ ನಿಧನ

09:51 PM Oct 01, 2022 | Team Udayavani |

ತಿರುವನಂತಪುರ/ಚೆನ್ನೈ: ಸಿಪಿಐಎಂ ಹಿರಿಯ ನಾಯಕ, ಕೇರಳ ಮಾಜಿ ಗೃಹ ಸಚಿವ ಕೊಡಿಯೇರಿ ಬಾಲಕೃಷ್ಣನ್‌(69) ಅನಾರೋಗ್ಯದ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

Advertisement

ಹಲವು ತಿಂಗಳಿನಿಂದ ಅವರು ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದರು. ಸಿಪಿಐಎಂ ಪಕ್ಷದ ಪ್ರಮುಖ ನಾಯಕರಲ್ಲಿ ಒಬ್ಬರಾದ ಬಾಲಕೃಷ್ಣನ್‌, 2015ರಿಂದ 2022ರವರೆಗೆ ಪಕ್ಷದ ಕೇರಳ ಘಟಕದ ಕಾರ್ಯದರ್ಶಿಯಾಗಿದ್ದರು. 2006ರಿಂದ 2011ರ ಅವಧಿಯಲ್ಲಿ ಕೇರಳ ಸಿಎಂ ವಿ.ಎಸ್‌.ಅಚ್ಯುತಾನಂದನ್‌ ಅವರ ಸಂಪುಟದಲ್ಲಿ ಗೃಹ ಮತ್ತು ಪ್ರವಾಸೋದ್ಯಮ ಸಚಿವರಾಗಿದ್ದರು.

ಅನಾರೋಗ್ಯದ ಹಿನ್ನೆಲೆಯಲ್ಲಿ ಆಗಸ್ಟ್‌ನಲ್ಲಿ ಪಕ್ಷದ ಕಾರ್ಯದರ್ಶಿ ಹುದ್ದೆಗೆ ರಾಜಿನಾಮೆ ನೀಡಿದ್ದರು.

ಬಾಲಕೃಷ್ಣನ್‌ ಅವರ ಸಾವಿನ ಹಿನ್ನೆಲೆಯಲ್ಲಿ ಯೂರೋಪ್‌ ಪ್ರವಾಸವನ್ನು ಕೇರಳ ಸಿಎಂ ಪಿಣರಾಯಿ ವಿಜಯನ್‌ ಮುಂದೂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next