Advertisement

ಸೋಂಕಿಗೆ ವೈದ್ಯ ಬಲಿ; 1 ಕೋ.ರೂ. ಪರಿಹಾರ

09:26 AM Jun 30, 2020 | mahesh |

ಹೊಸದಿಲ್ಲಿ: ದಿಲ್ಲಿಯ ಸರಕಾರಿ ಸ್ವಾಮ್ಯದ  ಎಲ್‌ಎನ್‌ಜೆಪಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರಿಗಾಗಿ ಸೇವೆ ಸಲ್ಲಿಸುತ್ತಿದ್ದ ಹಿರಿಯ ವೈದ್ಯ 52 ವರ್ಷದ ಡಾ| ಅಸೀಮ್‌ ಗುಪ್ತಾ ಕೋವಿಡ್ ಗೆ ಬಲಿಯಾಗಿದ್ದಾರೆ. ತುರ್ತು ನಿಗಾ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗುಪ್ತಾಗೆ 2 ವಾರಗಳ ಹಿಂದೆ ಕೋವಿಡ್ ಪಾಸಿಟಿವ್‌ ಬಂದಿತ್ತು. ಹೀಗಾಗಿ ರವಿವಾರ ರಾತ್ರಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಅವರ ಪತ್ನಿಯೂ ವೈದ್ಯೆಯಾಗಿದ್ದು, ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿತ್ತು. ಆದರೆ, ಅವರು ಸದ್ಯ ಚೇತರಿಸಿಕೊಂಡಿದ್ದಾರೆ. ಇದೇ ವೇಳೆ, ಡಾ| ಗುಪ್ತಾ ಅವರ ನಿಸ್ವಾರ್ಥ ಸೇವೆಯನ್ನು ಶ್ಲಾಘಿಸಿರುವ ದಿಲ್ಲಿ ಸಿಎಂ ಕೇಜ್ರಿವಾಲ್‌, ಗುಪ್ತಾರ ಕುಟುಂಬಕ್ಕೆ 1 ಕೋಟಿ ರೂ.ಗಳ ಪರಿಹಾರ ಘೋಷಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next