Advertisement

ದೆಹಲಿಯಲ್ಲಿ ಬಿಜೆಪಿ ಸೇರ್ಪಡೆಯಾದ ಜೆಡಿಎಸ್‌ ಮಾಜಿ ಶಾಸಕ ಎ.ಟಿ.ರಾಮಸ್ವಾಮಿ

05:56 PM Apr 01, 2023 | Team Udayavani |

ನವದೆಹಲಿ: ಜೆಡಿಎಸ್ ತೊರೆದಿರುವ ಹಾಸನ ಜಿಲ್ಲೆಯ ಅರಕಲಗೂಡು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ಅವರು ಶನಿವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.

Advertisement

ದೆಹಲಿಯ ಬಿಜೆಪಿ ಕೇಂದ್ರದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ರಾಮಸ್ವಾಮಿ ಅವರನ್ನು ಬಿಜೆಪಿಗೆ ಬರ ಮಾಡಿಕೊಂಡರು.

ಅರಕಲಗೂಡು ಕ್ಷೇತ್ರದಲ್ಲಿ 2004 ಮತ್ತು 2018 ರಲ್ಲಿ ಜೆಡಿಎಸ್‌ ನಿಂದ ರಾಮಸ್ವಾಮಿ ಅವರು ಆಯ್ಕೆಯಾಗಿದ್ದರು. 1989 ಮತ್ತು 1994 ರಲ್ಲಿ ಕಾಂಗ್ರೆಸ್ ಪಕ್ಷದಿಂದ ಎರಡು ಬಾರಿ ವಿಧಾನಸಭೆ ಪ್ರವೇಶಿಸಿದ್ದರು.

ಈ ಬಾರಿ ಎ. ಮಂಜು ಅವರು ಜೆಡಿಎಸ್ ಸೇರ್ಪಡೆಯಾಗಿದ್ದು ಇಬ್ಬರ ನಡುವೆ ಜಿದ್ದಾಜಿದ್ದು ಏರ್ಪಡುವ ಸಾಧ್ಯತೆಗಳಿವೆ.

Advertisement

Udayavani is now on Telegram. Click here to join our channel and stay updated with the latest news.

Next