ಬೆಳಗಾವಿ: ಜಿಲ್ಲೆಯ ಹಿರಿಯ ಪತ್ರಕರ್ತ, ಲೇಖಕ, ಹುಕ್ಕೇರಿ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರಕಾಶ ದೇಶಪಾಂಡೆ ಇಂದು ಬುಧವಾರ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು.
ಕೋವಿಡ್ ಸೋಂಕಿನಿಂದಾಗಿ ಅಸ್ವಸ್ಥರಾಗಿದ್ದ ಅವರನ್ನು ಹುಕ್ಕೇರಿಯ ಆಸ್ಪತ್ರೆಗೆ ಸೇರಿಸಲಾಗಿತ್ತು.
ಹುಕ್ಕೇರಿ ತಾಲೂಕಾ ಕ.ಸಾ.ಪ.ಘಟಕದ ಅಧ್ಯಕ್ಷರಾಗಿದ್ದ ಅವರು ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಅಭ್ಯರ್ಥಿಯಾಗಿದ್ದರು.
ಇದನ್ನೂ ಓದಿ:ಬೆಡ್ ಕೊರತೆ ನೀಗಿಸಲು 3200 ಸ್ಟೆಪ್ ಡೌನ್ ಆಸ್ಪತ್ರೆ ನಿರ್ಮಾಣ: ಬಸವರಾಜ ಬೊಮ್ಮಾಯಿ
ಕಳೆದ 40 ವರ್ಷಗಳಿಂದ ನಾಡಿನ ವಿವಿಧ ದಿನಪತ್ರಿಕೆಗಳ ವರದಿಗಾರರಾಗಿ ಕಾರ್ಯ ನಿರ್ವಹಿಸಿದ ಅವರು ಕಾಂಗ್ರೆಸ್ ಸೇವಾದಳದಲ್ಲಿ ಅಪಾರ ಸೇವೆ ಸಲ್ಲಿಸಿದ್ದರು.
ಕನ್ನಡ ನಾಡು ನುಡಿ ಹಾಗೂ ಗಡಿಯ ಸಂಬಂಧದ ಅನೇಕ ಹೋರಾಟಗಳಲ್ಲಿ ಭಾಗವಹಿಸಿದ್ದ ಅವರು ತಮ್ಮ ಹುಕ್ಕೇರಿ ತಾಲೂಕಿನಲ್ಲಿ ಅನೇಕ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.
ದಿವಂಗತರು ತಮ್ಮ ಹಿಂದೆ ಪತ್ನಿ,ಒಬ್ಬ ಪುತ್ರ ಮತ್ತು ಒಬ್ಬ ಪುತ್ರಿಯನ್ನು ಅಗಲಿದ್ದಾರೆ.