Advertisement

ಹಿರಿಯ ಸಾಹಿತಿ ಪ್ರೊ. ವಸಂತ ಕುಷ್ಟಗಿ ಇನ್ನಿಲ್ಲ

11:23 AM Jun 04, 2021 | Team Udayavani |

ಕಲಬುರಗಿ: ನಾಡಿನ‌ ಹಿರಿಯ ಸಾಹಿತಿ ಪ್ರೊ.ವಸಂತ ಕುಷ್ಟಗಿ(85) ಶುಕ್ರವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು. ‘ಹಾರೈಕೆ’ಯ ಕವಿ ಎಂದೇ ಖ್ಯಾತರಾಗಿದ್ದ ಇವರ ಅಗಲಿಕೆಯಿಂದ ಕಲ್ಯಾಣ ಕರ್ನಾಟಕದ ಸಾಹಿತ್ಯ ಕೊಂಡಿ ಕಳಚಿದಂತಾಗಿದೆ.

Advertisement

ಕಳೆದ ಒಂದು ವಾರ ಹಿಂದೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಪ್ರೊ.ವಸಂತ ಕುಷ್ಟಗಿ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದರು. ‌ಅವರು ಕಡಿಮೆ ರಕ್ತದೊತ್ತಡದಿಂದ ಬಳಲುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ್ದ ಅವರು, ಭಾಷಾ ಪಂಡಿತರೂ ಆಗಿದ್ದರು. ಕಲ್ಯಾಣ ಕರ್ನಾಟಕದ ಐತಿಹಾಸಿಕ ಶತಮಾನ ಕಂಡ ಪ್ರತಿಷ್ಠಿತ ನೂತನ ವಿದ್ಯಾಲಯದ ಕನ್ನಡ ಪ್ರಾಧ್ಯಾಪಕರು, ಪ್ರಾಂಶುಪಾಲರಾಗಿ ತಮ್ಮ ಜ್ಞಾನದ ಜ್ಯೋತಿಯಿಂದ ಅಸಂಖ್ಯಾತ ವಿದ್ಯಾರ್ಥಿಗಳ ಬಾಳನ್ನು ಬೆಳಗಿಸಿದ್ದರು.

1995ರಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯು ಎಸ್ಸೆಸ್ಸೆಲ್ಸಿ ಪಠ್ಯಕ್ರಮ ಪರಿಷ್ಕರಣೆಗಗೊಳಿಸಿದ ಸಂದರ್ಭದಲ್ಲಿ ಪ್ರಥಮ ಭಾಷೆಯಾದ ಕನ್ನಡದ ಪದ್ಯಭಾಗದಲ್ಲಿ ಮೊದಲ ಪದ್ಯವೇ ಇವರ ರಚಿಸಿದ ‘ಹಾರೈಕೆ’. ಈ ಕವಿತೆ ಮೂಲಕ ಕರುನಾಡಿನಾಧ್ಯoತ ಮನೆಮಾತಾಗಿದ್ದರು.

ಇದನ್ನೂ ಓದಿ:  ಭಿನ್ನ ಮಾದರಿಯಲ್ಲಿ ನಡೆಯಲಿದೆ SSLC ಪರೀಕ್ಷೆ: ಪರೀಕ್ಷೆ ಮಾದರಿ ತಿಳಿಸಿದ ಸಚಿವರು

Advertisement

ಪ್ರೊ.ವಸಂತ ಕುಷ್ಟಗಿ ಅವರು ದಾಸ ಸಾಹಿತ್ಯ ಕ್ಷೇತ್ರದಲ್ಲಿ ಮಾಡಿದ ಕೃಷಿ ಅಗಾಧವಾದುದು. ವಿದ್ವಾಂಸ, ವಿಮರ್ಶಕ, ಭಾಷಾಜ್ಞಾನಿ, ಹೋರಾಟಗಾರರಾಗಿಯೂ ಹೆಸರು ಮಾಡಿದ್ದರು.

ಹೈದರಾಬಾದ್‌ನ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಕನ್ನಡ ಎಂ.ಎ ಪದವಿ ಪಡೆದಿದ್ದ ಅವರು, 8 ಕವನ ಸಂಕಲನ, ಮೂವತ್ತಕ್ಕೂ ಹೆಚ್ಚು ಗದ್ಯ ಸಂಕಲನ, 16ಕ್ಕೂ ಹೆಚ್ಚುಸಂಪಾದನೆ ಪುಸ್ತಕಗಳು, 22ಕ್ಕೂ ಹೆಚ್ಚು ಸಂಪಾದಿಸಿದ ಗ್ರಂಥಗಳು ರಚಿಸಿ ಸಾಹಿತ್ಯ ಕೃಷಿಗೈದಿದ್ದರು.

ದಿವಂಗತ ಎನ್‌.ಧರ್ಮಸಿಂಗ್‌ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಬಂದಿತ್ತು. ಒಂದು ಬಾರಿ ಕಲಬುರ್ಗಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿಕೊಂಡಿದ್ದರು. 2019ರಲ್ಲಿ ಕಲಬುರಗಿಯಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿಕೊಳ್ಳಲು ಪ್ರೊ.ವಸಂತ ಕುಷ್ಟಗಿ ಅವರ ಹೆಸರು ಕೂಡ ಮುಂಚೂಣಿಗೆ ಬಂದಿತ್ತು.

ಇದನ್ನೂ ಓದಿ:   ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು: ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಆದೇಶ

Advertisement

Udayavani is now on Telegram. Click here to join our channel and stay updated with the latest news.

Next