Advertisement

KFCSC ; ಉನ್ನತ ತನಿಖೆಗಾಗಿ ಹಿರಿಯ ಅಧಿಕಾರಿಗಳು ಶೀಘ್ರ ಬಂಟ್ವಾಳಕ್ಕೆ

12:00 AM Aug 20, 2023 | Team Udayavani |

ಬಂಟ್ವಾಳ: ಬಿ.ಸಿ.ರೋಡಿನ ಕೆಎಸ್‌ಆರ್‌ಟಿಸಿ ಡಿಪೋದ ಮುಂಭಾ ಗದಲ್ಲಿರುವ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ (ಕೆಎಫ್‌ಸಿಎಸ್‌ಸಿ)ದ ಗೋದಾಮಿ ನಲ್ಲಿದ್ದ ಪಡಿತರ ಅಕ್ಕಿ ದಾಸ್ತಾನಿನಲ್ಲಿ 1.32 ಕೋ.ರೂ.ಗಳ 3,892.95 ಕ್ವಿಂಟಾಲ್‌ ಅಕ್ಕಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ಅಧಿಕಾರಿಗಳಿಂದಲೇ ತನಿಖೆ ನಡೆಯಬೇಕಿರುವುದರಿಂದ ಶೀಘ್ರ ಕೆಎಫ್‌ಸಿಎಸ್‌ಸಿಯ ಕೇಂದ್ರ ಕಚೇರಿಯ ಅಧಿಕಾರಿ ಬಂಟ್ವಾಳಕ್ಕೆ ಆಗಮಿಸುವ ಸಾಧ್ಯತೆ ಇದೆ.

Advertisement

ಅವ್ಯವಹಾರ ಪ್ರಕರಣದಲ್ಲಿ ಹೆಚ್ಚಿನ ಪ್ರಮಾಣದ ಅಕ್ಕಿಯ ಕೊರತೆ ಇರುವುದರಿಂದ ಇದನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ್ದ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರು ಕೂಡ ಕೇಂದ್ರ ಕಚೇರಿಯ ಅಧಿಕಾರಿಗಳಿಂದಲೇ ತನಿಖೆ ನಡೆಯಬೇಕು ಎಂದು ಹೇಳಿದ್ದರು. ಹೀಗಾಗಿ ಆ. 20 ಅಥವಾ 21ಕ್ಕೆ ಅಧಿಕಾರಿಗಳು ಗೋದಾಮಿಗೆ ಭೇಟಿ ನೀಡಲಿದ್ದಾರೆ.

ಅಕ್ಕಿಯ ದಾಸ್ತಾನು ಕೊರತೆಗೆ ಸಂಬಂಧಿಸಿ ಈಗಾಗಲೇ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದರಿಂದ ಪೊಲೀಸ್‌ ಆಯಾಮ ತನಿಖೆ ಮುಂದುವರಿದಿದ್ದು, ಪೊಲೀಸರು ಈಗಾಗಲೇ ಕಿರಿಯ ಸಹಾ ಯಕ ವಿಜಯ್‌ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅವರ ಹೇಳಿಕೆ ಆಧಾರದಲ್ಲಿ ಪ್ರಕರಣ ಹಿಂದೆ ಇನ್ಯಾರಾ ದರೂ ಇದ್ದಾರೆಯೇ ಎಂಬುದು ಬೆಳಕಿಗೆ ಬರುವ ಸಾಧ್ಯತೆ ಇದೆ.

ಮುಂದೆ ಕೆಎಫ್‌ಸಿಎಸ್‌ಸಿಯ ಕೇಂದ್ರ ಕಚೇರಿಯ ಅಧಿಕಾರಿಗಳು ಯಾವ ರೀತಿಯ ತನಿಖೆ ನಡೆಸಲಿದ್ದಾರೆ ಎಂಬ ಕುರಿತು ಸ್ಪಷ್ಟ ಮಾಹಿತಿ ತಿಳಿದುಬಂದಿಲ್ಲ. ಆದರೆ ಇಂತಹ ಗಂಭೀರ ಪ್ರಕರಣದ ಮೂಲಕ ನಿಗಮದ ಕುರಿತು ಸಂಶಯ ಮೂಡುವಂತೆ ಮಾಡಿದವರ ವಿರುದ್ಧ ಕಠಿನ ಕ್ರಮದ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ. ಒಟ್ಟಿನಲ್ಲಿ 1.32 ಕೋ.ರೂ.ಗಳಿಗೂ ಮಿಕ್ಕಿದ ಅಕ್ಕಿ ಎಲ್ಲಿಗೆ ಹೋಗಿದೆ ಎಂಬ ಕುತೂಹಲ ಎಲ್ಲರಲ್ಲೂ ಇದೆ.

Advertisement

Udayavani is now on Telegram. Click here to join our channel and stay updated with the latest news.

Next