Advertisement

ಆಸ್ಪತ್ರೆಗೆ ದಾಖಲಾಗಿರುವ ಕವಿ ಕಣವಿ ಆರೋಗ್ಯ ಚೇತರಿಕೆ ; ಸಿಎಂ ಹಾರೈಕೆ

01:27 PM Jan 16, 2022 | Team Udayavani |

ಧಾರವಾಡ: ಸತ್ತೂರಿನ ಎಸ್‌ಡಿಎಂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿ, ನಾಡೋಜ ಡಾ| ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಚೇತರಿಕೆ ಆಗಿದ್ದು, ಆರೋಗ್ಯ ಸ್ಥಿರವಾಗಿದೆ.

Advertisement

ಆಸ್ಪತ್ರೆ ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ಜಿಲ್ಲಾಡಳಿತ ಎಸ್‌ಡಿಎಂ ಆಸ್ಪತ್ರೆಯ ಮ್ಯಾನೇಜ್‌ಮೆಂಟ್‌ನೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಡಾ| ಕಣವಿ ಅವರ ಆರೋಗ್ಯ ಕ್ಷೇಮತೆಗೆ ಅಗತ್ಯ ಕ್ರಮ ವಹಿಸಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ಸಿಎಂ ಬೊಮ್ಮಾಯಿ ಟ್ವೀಟ್

ನಾಡಿನ ಹಿರಿಯ ಸಾಹಿತಿ, ಕವಿ, ನಾಡೋಜ ಡಾ|| ಚೆನ್ನವೀರ ಕಣವಿ ಅವರು ಉಸಿರಾಟದ ತೊಂದರೆಯಿಂದ ಧಾರವಾಡದ SDM ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಕುರಿತು ಅವರ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಡಾ|| ಚೆನ್ನವೀರ ಕಣವಿ ಅವರು ಶೀಘ್ರವಾಗಿ ಗುಣಮುಖರಾಗಲೆಂದು ಹಾರೈಸುತ್ತೇನೆ. ಎಂದು ಮುಖ್ಯಮಂತ್ರಿ ಅವರು ಟ್ವೀಟ್ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next