Advertisement

ಇಡಿ ಅಧಿಕಾರಿಗಳ ವಶದಲ್ಲಿರುವ ಸೆಂಥಿಲ್‌ಗೆ ಇಂದು ಓಪನ್‌ ಹಾರ್ಟ್‌ ಸರ್ಜರಿ

01:13 PM Jun 21, 2023 | sudhir |

ಚೆನ್ನೈ: ಜಾರಿ ನಿರ್ದೇಶನಾಲಯದಿಂದ(ಇಡಿ) ಬಂಧಿತರಾಗಿರುವ ತಮಿಳುನಾಡು ಸಚಿವ ವಿ.ಸೆಂಥಿಲ್‌ ಬಾಲಾಜಿ ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಓಪನ್‌ ಹಾರ್ಟ್‌ ಸರ್ಜರಿಗೆ ಒಳಗಾಗಲಿದ್ದಾರೆ ಎಂದು ತಮಿಳುನಾಡು ಆರೋಗ್ಯ ಸಚಿವ ಸುಬ್ರಮಣಿಯನ್‌ ತಿಳಿಸಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಹೃದಯ ಸಂಬಂಧಿ ತೊಂದರೆ ಹಿನ್ನೆಲೆಯಲ್ಲಿ ವೈದ್ಯರು ಶಸ್ತ್ರಚಿಕಿತ್ಸೆಗೆ ಸಲಹೆ ನೀಡಿದ್ದರು. ಆಸ್ಪತ್ರೆಯ ಆಡಳಿತ ಮಂಡಳಿಯೊಂದಿಗೆ ನಾವು ಸಂಪರ್ಕದಲ್ಲಿದ್ದೇವೆ,’ ಎಂದು ಹೇಳಿದ್ದಾರೆ. ಉದ್ಯೋಗಕ್ಕಾಗಿ ಲಂಚ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಕಳೆದ ವಾರ ಸೆಂಥಿಲ್‌ರನ್ನು ಬಂಧಿಸಿದ್ದರು. ಈ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆ್ಯಂಜಿಯೊಗ್ರಾಮ್‌ಗೆ ಒಳಪಡಿಸಲಾಗಿತ್ತು.

 

Advertisement

Udayavani is now on Telegram. Click here to join our channel and stay updated with the latest news.

Next