Advertisement
ಕಡೇಶ್ವಾಲ್ಯ ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ಸಚಿನ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ಆತ ಬಂಟ್ವಾಳದ ಎಲೆಕ್ಟ್ರಿಕಲ್ ಗುತ್ತಿಗೆ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಅ. 18ರಂದು ಬೆಳಗ್ಗೆ ಕೆಲಸಕ್ಕೆ ಹೋದವನು ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಆತನ ಮೊಬೈಲ್ ರಿಂಗಣಿಸಿದರೂ ರಿಸೀವ್ ಮಾಡುತ್ತಿರಲಿಲ್ಲ. ಆತನ ಮಾವನ ಮನೆ ಕಾಮಾಜೆಯಲ್ಲಿದ್ದು, ಅಲ್ಲಿಗೂ ಆಗಮಿಸಿರಲಿಲ್ಲ.ಬಳಿಕ ಆತನನ್ನು ಹುಡುಕಾಡಿದಾಗ ಅ. 19ರ ಮುಂಜಾನೆ 3ರ ಸುಮಾರಿಗೆ ಬಿ.ಸಿ.ರೋಡಿನ ಮಿತ್ತಕೋಡಿಯ ಮೈದಾನದ ಬಳಿ ಆತನ ಸ್ಕೂಟರ್ ಪತ್ತೆಯಾಗಿದೆ. ಅಲ್ಲೇ ಹತ್ತಿರದ ಕಾಮಾಜೆಯ ಗುಡ್ಡದಲ್ಲಿ ಆತನ ಮೊಬೈಲ್ ರಿಂಗ್ ಆಗುವುದು ಕೇಳಿದ್ದು, ಅಲ್ಲಿ ಆತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಉಪ್ಪುಂದ: ದೇವಸ್ಥಾನಕ್ಕೆ ಹೋಗಿ ಪೂಜೆ ಮುಗಿಸಿಕೊಂಡು ಬಂದ ವ್ಯಕ್ತಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಂದೂರಿನಲ್ಲಿ ನಡೆದಿದೆ. ಬುದ್ದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಅವರು ತಂಗಿಯವರೊಂದಿಗೆ ಕಾಲೊಡು ಗ್ರಾಮದ ಮಾರಿಕಾಂಬ ದೇವಸ್ಥಾನಕ್ಕೆ ಹೋಗಿ ದೇವಸ್ಥಾನದಲ್ಲಿ ಚಂಡಿಕಾಹೋಮ ಪೂಜಾ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಬಂದ ಬಳಿಕ ಬಾಟಲಿ ತಂದು ತೋರಿಸಿ ವಿಷ ಕುಡಿದಿರುವುದಾಗಿ ತಿಳಿಸಿದ್ದು, ತತಕ್ಷಣ ಅವರನ್ನು 108 ಆ್ಯಂಬುಲೆನ್ಸ್ ವಾಹನದಲ್ಲಿ ಚಿಕಿತ್ಸೆಗೆ ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Related Articles
ವಿಟ್ಲ: ನೇಣು ಬಿಗಿದುಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣಚ ಗ್ರಾಮದಲ್ಲಿ ನಡೆದಿದೆ. ಪುಣಚ ಚೆಕ್ಕುತ್ತಿ ನಿವಾಸಿ ಶ್ರೀಕೃಷ್ಣ (26) ಆತ್ಮಹತ್ಯೆ ಮಾಡಿಕೊಂಡ ಯುವಕ. ಶ್ರೀಕೃಷ್ಣ ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದು, ಆತ್ಮಹತ್ಯೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಅವರು ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Advertisement
ಅನಾರೋಗ್ಯದ ಕಾರಣ ಆತ್ಮಹತ್ಯೆಬ್ರಹ್ಮಾವರ: ಇಲ್ಲಿನ ರವಿ (57) ಗುರುವಾರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಬಿ.ಪಿ., ಶುಗರ್ನಿಂದ ಬಳಲುತ್ತಿದ್ದು, ವಿಪರೀತ ಮಧ್ಯಪಾನ ಮಾಡುತ್ತಿದ್ದರು ಎನ್ನಲಾಗಿದೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.